Amit Shah: ದೇಶದಲ್ಲಿ ಅಡಗಿರುವ ಪಾಕ್ ನಾಗರಿಕರ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡಲು ಗೃಹ ಸಚಿವ ಸೂಚನೆ..!

ಎಪ್ರಿಲ್ 25, 2025 - 21:08
 0  10
Amit Shah: ದೇಶದಲ್ಲಿ ಅಡಗಿರುವ ಪಾಕ್ ನಾಗರಿಕರ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡಲು ಗೃಹ ಸಚಿವ ಸೂಚನೆ..!

ನವದೆಹಲಿ: ಏಪ್ರಿಲ್ 22ರಂದು ಪಹಲ್ಗಾಮ್​​ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಪೈಶಾಚಿಕ ದಾಳಿಗೆ 26 ಅಮಾಯಕರು ಜೀವ ಕಳೆದುಕೊಂಡಿದ್ದರು. ಹೀಗಾಗಿ ಈ ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಭಾರತೀಯ ಸೇನೆ ದಿಟ್ಟ ಹೆಜ್ಜೆಯನ್ನಿಟ್ಟಿದೆ. 26 ಪ್ರವಾಸಿಗರ ಬಲಿ ಪಡೆದಿದ್ದ ಇಬ್ಬರು ಶಂಕಿತರ ಮನೆಗಳನ್ನು ಉಡೀಸ್ ಮಾಡಲಾಗಿದೆ.

ಇದೀಗ  ಯಾವೊಬ್ಬ ಪಾಕಿಸ್ತಾನಿ ಪ್ರಜೆಯೂ ಕೇಂದ್ರ ಸರ್ಕಾರ ನೀಡಿರುವ ಗಡುವನ್ನು ಮೀರಿ ದೇಶದಲ್ಲಿ ಉಳಿಯದಂತೆ ನೋಡಿಕೊಳ್ಳಬೇಕೆಂದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ  ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದ್ದಾರೆ. ಪಾಕ್ ನಾಗರಿಕರಿಗೆ ನೀಡಿರುವ ವೀಸಾ ರದ್ದತಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಹೀಗಾಗಿ ದೇಶದಲ್ಲಿ ಅಡಗಿರುವ ಪಾಕ್ ನಾಗರಿಕರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲು ತಾಕೀತು ಮಾಡಲಾಗಿದೆ.

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಈ ಬಗ್ಗೆ ಅಮಿತ್‌ ಶಾ ಮಾತನಾಡಿದ್ದಾರೆ. ಎಲ್ಲಾ ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಪತ್ತೆಹಚ್ಚಿ ದೇಶದಿಂದ ವಾಪಸ್‌ ಕಳುಹಿಸಬೇಕು ಎಂದು ಹೇಳಿದ್ದಾರೆಂದು ವರದಿಯಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow