AR Rahman: ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ದೀಢೀರ್ ಆಸ್ಪತ್ರೆಗೆ ದಾಖಲು!

ಭಾರತದ ಶ್ರೇಷ್ಠ ಸಂಗೀತ ಸಂಯೋಜಕರಲ್ಲಿ ಒಬ್ಬರಾದ ಎ.ಆರ್. ರೆಹಮಾನ್ ಅವರಿಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡ ನಂತರ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಇಂದು ಬೆಳಿಗ್ಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದ್ದು, ಶೀಘ್ರವೇ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ 7:30ಕ್ಕೆ ಎಆರ್ ರೆಹಮಾನ್ ಆಸ್ಪತ್ರೆಗೆ ಬಂದಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಎಆರ್ ರೆಹಮಾನ್ ಅವರಿಗೆ ಇಸಿಜಿ ಸೇರಿದಂತೆ ಹಲವು ಬೇರೆ ಬೇರೆ ಪರೀಕ್ಷೆಗಳನ್ನು ಮಾಡಿಸಲಾಗಿದೆ. ಅವರ ಹೃದಯನಾಳದ ಕೆಲವೆಡೆ ಬ್ಲಾಕೇಜ್ಗಳು ಇರುವುದು ಪರೀಕ್ಷೆಗಳಿಂದ ತಿಳಿದುಬಂದಿದ್ದು ಮೂಲಗಳಿಂದ ತಿಳಿದು ಬಂದಿರುವ ಮಾಹಿತಿಯಂತೆ ಎಆರ್ ರೆಹಮಾನ್ ಅವರಿಗೆ ಆಂಜಿಯೋಗ್ರಾಂ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎನ್ನಲಾಗುತ್ತಿದೆ. ಇನ್ನೂ ಕೆಲ ದಿನ ಅಪೋಲೊ ಆಸ್ಪತ್ರೆಯಲ್ಲಿಯೇ ಕಳೆಯಲಿರುವ ಎಆರ್ ರೆಹಮಾನ್ ಆಂಜಿಯೋಗ್ರಾಂ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






