Bangalore: ಸಿಗರೇಟ್ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..! ಸಾಫ್ಟ್ವೇರ್ ಇಂಜಿನಿಯರ್ ಸಾವು

ಮೇ 17, 2025 - 12:00
 0  19
Bangalore: ಸಿಗರೇಟ್ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..! ಸಾಫ್ಟ್ವೇರ್ ಇಂಜಿನಿಯರ್ ಸಾವು

ಬೆಂಗಳೂರು: ಸಿಗರೇಟ್​​ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಕೋಣನಕುಂಟೆ ಕ್ರಾಸ್,ಕನಕಪುರ ರಸ್ತೆ ತಿರುವಿನ ಬಳಿ ನಡೆದಿದೆ. ಘಟನೆಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಸಂಜಯ್ ಸಾವನ್ನಪ್ಪಿದ್ದು, ಮತ್ತೋರ್ವ ಬೈಕ್ ನಲ್ಲಿದ್ದ ಯುವಕ ಚೇತನ್ ಗೆ ಗಂಭೀರ ಗಾಯಗಳಾಗಿವೆ. ಸುಬ್ರಹ್ಮಣ್ಯಪುರ ಪೊಲೀಸರಿಂದ ಕಾರು ಚಾಲಕ ಆರೋಪಿ ಪ್ರತೀಕ್ ನನ್ನು ಬಂಧಿಸಲಾಗಿದೆ.

ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದ ಸಂಜಯ್, ಕಾರ್ತಿಕ್ ಸಿಗರೇಟ್ ಸೇದಲು ಕಚೇರಿಯಿಂದ ಹೊರಬಂದಿದ್ದರು. ಇಲ್ಲಿನ ರಸ್ತೆ ಬದಿಯ ಸೈಕಲ್‌ನಲ್ಲಿ ಸಿಗರೇಟ್ ತೆಗೆದುಕೊಂಡಿದ್ದರು. ಅಲ್ಲೇ ನಿಂತು ಇಬ್ಬರು ಟೆಕ್ಕಿಗಳು ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಕಾರಿನಿಂದ ಇಳಿಯದೇ, ಸಂಜಯ್‌ಗೆ ಸಿಗರೇಟ್ ತಂದುಕೊಡುವಂತೆ ಹೇಳಿದ್ದ. ಇದರಿಂದ ಕೋಪಗೊಂಡ ಸಂಜಯ್ ಮತ್ತು ಕಾರ್ತಿಕ್ ಕಾರಿನಲ್ಲಿದ್ದ ಪ್ರತೀಕ್ ನಡುವೆ ಗಲಾಟೆ ನಡೆದಿತ್ತು.

ಗಲಾಟೆ ಜೋರಾಗಿ ಅಂಗಡಿಯವರು ಬಿಡಿಸಿ ಕಳುಹಿಸಿದ್ದರು. ಕೋಪಗೊಂಡ ಪ್ರತೀಕ್ ಕಾರಿನಲ್ಲಿ ಮುಂದೆ ಹೋಗಿ ರಸ್ತೆ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದ. ಸಿಗರೇಟ್ ಸೇದಿ ಇಬ್ಬರೂ ಬೈಕ್‌ನಲ್ಲಿ ಮುಂದೆ ಬರುತ್ತಿದ್ದಂತೆ. ವೇಗವಾಗಿ ಬಂದು ಇಬ್ಬರು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ, ಸಂಜಯ್ ಸ್ಥಳದಲ್ಲೇ ಸಾವನ್ನಪ್ಪಿದ. ಕಾರ್ತಿಕ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow