BBK11: ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚೈತ್ರಾ ಕುಂದಾಪುರ.! ಯಾಕೆ ಗೊತ್ತಾ..?

ಬೆಂಗಳೂರು: ಹಿಂದೂ ಕಾರ್ಯಕರ್ತೆ ಆಗಿ ಚೈತ್ರಾ ಕುಂದಾಪುರ ಗುರುತಿಸಿಕೊಂಡಿದ್ದರು. ಅವರ ವಿರುದ್ಧ ವಂಚನೆ ಆರೋಪ ಇದೆ. ಈಗ ಅವರು, ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿಯಾಗಿದ್ದಾರೆ. 2022ರಲ್ಲಿ ವಂಚನೆ ನಡೆದಿದ್ದು 2023ರಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಇದಾಗಿದೆ.
2023ರ ಸೆಪ್ಟೆಂಬರ್ನಲ್ಲಿ ಚೈತ್ರಾ ಬಂಧನವಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಚೈತ್ರಾ ಹಾಗೂ ಇತರ ಆರೋಪಿಗಳ ವಿರುದ್ಧ 800 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು. ಡಿಸೆಂಬರ್ನಲ್ಲಿ ಇವರಿಗೆ ಜಾಮೀನು ಸಿಕ್ಕಿತ್ತು. ಈ ಪ್ರಕರಣ ಇನ್ನೂ ಕೋರ್ಟ್ನಲ್ಲಿದೆ.
ಆದ್ದರಿಂದ ಚೈತ್ರಾ ಕುಂದಾಪುರ ಅವರು ನೇರವಾಗಿ ಬಿಗ್ ಬಾಸ್ ಮನೆಯಿಂದ ಬಿಗ್ ಬಾಸ್ ರಿಯಾಲಿಟಿ ಶೋನ ಕಾರಿನಲ್ಲಿನೇ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ಗೆ ಬಂದು ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಚೈತ್ರ ಕುಂದಾಪುರ, ಶ್ರೀಕಾಂತ್, ಹಿರೇ ಹಡಗಲಿಯ ಹಾಲಸ್ವಾಮಿ ಮಠದ ಸ್ವಾಮೀಜಿ ಸೇರಿದಂತೆ ಮೂವರು ಆರೋಪಿಗಳು ವಂಚನೆ ಮಾಡಿದ್ದರು. ಈ ಪೈಕಿ ಇಂದು ಚೈತ್ರಾ ಕುಂದಾಪುರ ಸೇರಿದಂತೆ ಮೂವರು ಆರೋಪಿಗಳು ಕೋರ್ಟ್ಗೆ ಹಾಜರು ಆಗಿದ್ದರು.
ಇನ್ನು ಕೋರ್ಟ್ಗೆ ಹಾಜರಾಗಲೇಬೇಕು ಎಂಬ ವಾರೆಂಟ್ ಹಿನ್ನೆಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಅವರ ನೇರವಾಗಿ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ವಾರೆಂಟ್ ರೀ ಕಾಲ್ ಮಾಡಿಸಿಕೊಂಡಿದ್ದಾರೆ. ಇದಾದ ನಂತರ ಚೈತ್ರಾ ಅವರ ವಿಚಾರಣೆಯನ್ನು ಕೋರ್ಟ್ನಿಂದ ಜನವರಿ 13ಕ್ಕೆ ಮುಂದೂಡಿಕೆ ಮಾಡಲಾಗಿದೆ. ವಾರೆಂಟ್ ಜಾರಿ ಹಿನ್ನೆಲೆ ಬಿಗ್ ಬಾಸ್ ಮನೆಯಿಂದ ಹೊರ ಬಂದಿರೋ ಚೈತ್ರ ಅವರು ಮನೆಗೆ ಹೋಗಿ ಬರ್ತಾರಾ ಎಂಬ ಅನುಮಾನ ಕಾಡತೊಡಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






