BBMPಗೆ ನೂತನ ಸಾರಥಿ: ತುಷಾರ್ ಗಿರಿನಾಥ್ ವರ್ಗಾವಣೆ! ಹೊಸ ಮುಖ್ಯ ಆಯುಕ್ತರು ಯಾರು?

ಎಪ್ರಿಲ್ 29, 2025 - 12:07
 0  15
BBMPಗೆ ನೂತನ ಸಾರಥಿ:  ತುಷಾರ್ ಗಿರಿನಾಥ್ ವರ್ಗಾವಣೆ! ಹೊಸ ಮುಖ್ಯ ಆಯುಕ್ತರು ಯಾರು?

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.. ಹೌದು ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿದೆ. ಬಿಎಂಆರ್​ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ನೇಮಕ ಮಾಡುವ ಮೂಲಕ ಹೆಚ್ಚುವರಿ ಹೊಣೆ ನೀಡಲಾಗಿದೆ.

ತುಷಾರ್​ ಗಿರಿನಾಥ್​ ಅವರು ಕಳೆದ ಎರಡೂವರೆ ವರ್ಷಗಳಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತುಷಾರ್​ ಗಿರಿನಾಥ್​ ಅವರು ಈ ಹಿಂದೆ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ಲಿಮಿಟೆಡ್​ (ಬೆಸ್ಕಾಂ) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್​ಎಸ್​ಬಿ) ಮುಖ್ಯಸ್ಥರಾಗಿದ್ದರು. ನಗರ ಆಡಳಿತದ ಬಗ್ಗೆ ಅವರ ಆಳವಾದ ತಿಳುವಳಿಕೆ, ನಗರಾಭಿವೃದ್ಧಿ ಇಲಾಖೆ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸುವ ಆಶಯ ಜನರಲ್ಲಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow