Bengaluru: ಮೋಟರ್ʼಗೆ ಅಳವಡಿಸಿದ್ದ ವೈರ್ ತಗುಲಿ ಮಹಿಳೆ ಸಾವು..!

ಬೆಂಗಳೂರು: ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ಮೃತಪಟ್ಟಿರುವ ಘಟನೆ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ಇಂದು ಬೆಳಗ್ಗೆ 5:30ರ ಸುಮಾರಿಗೆ ದುರ್ಘಟನೆ ನಡೆದಿದೆ. ಸೆಲ್ವಿ ಮೃತ ಮಹಿಳೆಯಾಗಿದ್ದು, ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ.
ಆಕ್ರೋಶಗೊಂಡ ಸ್ಥಳೀಯರಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ದಾರೆ. ಪರಿಣಾಮ ಮಾರ್ಕೆಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೈಸೂರು ರಸ್ತೆ ಎರಡೂ ಕಡೆ ಸಂಪೂರ್ಣ ಬಂದ್ ಆಗಿದ್ದು, ನ್ಯಾಯ ಬೇಕು ಎಂದು ಘೋಷಣೆ ಕೂಗಿ ಸಾರ್ವಜನಿಕರು ಪ್ರತಿಭಟಿಸಿದ್ದಾರೆ. ಜಲಮಂಡಳಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






