Bengaluru: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಕಾಮುಕ..! ನರಳಿ ನರಳಿ ಪ್ರಾಣ ಬಿಟ್ಟ ಬಾಲಕಿ

ಎತ್ತ ಸಾಗುತ್ತಿದೆ ನಮ್ಮ ಭಾರತ? ಪ್ರತಿದಿನ ಅತ್ಯಾಚಾರ ಪ್ರಕರಣಗಳೇ ಹೆಚ್ಚು ಬೆಳಕಿಗೆ ಬರುತ್ತಿವೆ. ಭಾರತ ದೇಶವು ಸಂಸ್ಕೃತಿ ಮತ್ತು ನಾಗರಿಕತೆಯ ಶ್ರೀಮಂತಿಕೆಗೆ ವಿಶ್ವಕ್ಕೆ ಮಾದರಿಯಾಗಿದೆ. ಶ್ರೀರಾಮನ ಸ್ತ್ರೀ ಗೌರವ, ಲಕ್ಷ್ಮಣ ನ ಮಾತೃಭಕ್ತಿ, ಸರ್ವರಲ್ಲೂ ತಾಯಿಯನ್ನೇ ಕಾಣುವ ವಿವೇಕಾನಂದರಂಥ ಆದರ್ಶಪ್ರಾಯರು ನಾಡಿನ ಸಂಸ್ಕೃತಿಯನ್ನು ಎತ್ತಿ ಹಿಡಿದಿದ್ದಾರೆ. ಮನು ಸೃತಿಯಲ್ಲೂ `ಸಹ ಯತ್ರ ನಾರ್ಯಂತು ಪೂಜ್ಯತೇ, ರಮಂತೇ ತತ್ರ ದೇವತಾ’ ಎಂದು ಉಲ್ಲೇಖಿಸಲಾಗಿದೆ. ಇಷ್ಟಿದ್ದರೂ ಈ ದೇಶದ ಸದ್ಯದ ಪರಿಸ್ಥಿತಿ ನಿಜಕ್ಕೂ ಶೋಚನಿಯ.
ಇದೀಗ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ.
ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ. ಸದ್ಯ, ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕ್ನನ್ನು ಬಂಧಿಸಿದ್ದಾರೆ. ಇನ್ನು, ಅಭಿಷೇಕ್ ಕುಮಾರ್ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದನು.
ನಿಮ್ಮ ಪ್ರತಿಕ್ರಿಯೆ ಏನು?






