Bengaluru Power Cut: ಬೆಂಗಳೂರಿನ ನಾಗರೀಕರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

ಸೆಪ್ಟೆಂಬರ್ 24, 2024 - 17:59
 0  10
Bengaluru Power Cut: ಬೆಂಗಳೂರಿನ ನಾಗರೀಕರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕಳೆದ ಸಾಕಷ್ಟು ದಿನಗಳಿಂದ ಪವರ್ ಕಟ್ ಆಗುತ್ತಿದ್ದು, ಅದರಂತೆ ನಾಳೆಯು ನಿರ್ವಹಣಾ ಕಾಮಗಾರಿಗಳಿರುವ ಕಾರಣಕ್ಕೆ ಕೆಪಿಟಿಸಿಎಲ್‌ ಮತ್ತು ಬೆಸ್ಕಾಂ ಆಗಾಗ್ಗೆ ವಿದ್ಯುತ್‌ ಪೂರೈಕೆಯಲ್ಲಿ ಅಡಚಣೆ ಮಾಡುತ್ತವೆ. ನಾಳೆಯೂ ಸಹ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. 

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್‌ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಹೀಗಾಗಿ ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow