Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

ಅಕ್ಟೋಬರ್ 14, 2024 - 14:41
 0  12
Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ಘನ ಘೋರ ಘಟನೆಯೊಂದು ನಡೆದಿದ್ದುಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿನಾಶ್ (33) ಪತಿ, ಮಮತಾ (30) ಪತ್ನಿ, ಅಧಿರಾ (05) ಮಗಳು, ಅಣ್ಣಯ್ಯ (03) ಮಗ ಮೃತ ದುರ್ದೈವಿಗಳು.

 ಅವಿನಾಶ್ ಗುಲ್ಬರ್ಗ ಮೂಲದವನಾಗಿದ್ದು, ನರಸಪ್ಪ ಎಂಬುವವರ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ವಾಸವಿದ್ದನು. ಅವಿನಾಶ್ಸಹೋದರ ಉದಯ್ ಎಂಬಾತ ದೂರು ನೀಡಿದ ಹಿನ್ನೆಲೆ ಪರಿಶೀಲಿಸಿದಾಗ ನಾಲ್ವರು ನೇಣಿಗೆ ಶರಣಾದ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow