Bengaluru: ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಆಗುತ್ತಾ..? ಡಿಕೆ ಶಿವಕುಮಾರ್ ಹೇಳಿದ್ದೇನು..?

ಜನವರಿ 28, 2025 - 16:09
 0  9
Bengaluru: ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಆಗುತ್ತಾ..? ಡಿಕೆ ಶಿವಕುಮಾರ್ ಹೇಳಿದ್ದೇನು..?

 

ಬೆಂಗಳೂರಿನ ನಾಗರಿಕರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ವಿದ್ಯುತ್ ಬಿಲ್ ಹೆಚ್ಚಳವಾದ ಬೆನ್ನಲ್ಲೇ ಬೆಂಗಳೂರಿಗೆ ಸರಬರಾಜಾಗುವ ನೀರಿನ ದರವು ಹೆಚ್ಚಳವಾಗುತ್ತದೆಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಹೌದು ಡಿಸಿಎಂ ಡಿ.ಕೆ ಶಿವಕುಮಾರ್ ಜೊತೆ ಅಧಿಕಾರಿಗಳು ಜಲಮಂಡಳಿ ಕಚೇರಿಯಲ್ಲಿ ಸಭೆ ನಡೆಸಿದ್ದು, ಇನ್ನು ಸಭೆ ಬಳಿಕ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,

ಈಗಾಗಲೇ ಜಲಮಂಡಳಿ ಸಂಸ್ಥೆ ನಷ್ಟದಲ್ಲಿದೆ ಅಂತ ಅಧಿಕಾರಿಗಳು ಹೇಳಿದ್ದು, ದರ ಹೆಚ್ಚು ಮಾಡದಿದ್ದರೆ ಈ ಸಾಲಿನ ಬೇಸಿಗೆ ಕಾಲದಲ್ಲಿ ಸಂಸ್ಥೆಗೆ ಹೊಡೆತ ಬೀಳುತ್ತೆ. ಕಳೆದ ವರ್ಷ ನಗರದಲ್ಲಿ ನೀರಿನ ಅಭಾವ ಹೆಚ್ಚಾಗಿತ್ತು. ಆದರೆ ಈ ಬಾರಿ ಅದೇ ರೀತಿ ಆಗಬಾರದು ಮತ್ತು ಮುಂಜಾಗ್ರತೆ ವಹಿಸುವಂತೆ ಸಲಹೆ ನೀಡಿದ್ದಾರೆ.

2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ‌ ಮಾಡಿಲ್ಲ. ಇದರಿಂದ ತಿಂಗಳಿಗೆ 85 ಕೋಟಿಯಂತೆ ವರ್ಷಕ್ಕೆ 1 ಸಾವಿರ ಕೋಟಿ ಸಂಸ್ಥೆ ನಷ್ಟ ಎದುರಿಸುತ್ತಿದೆ. ಹೀಗಾಗಿ ನೀರಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಶೀಘ್ರವೇ ನೀರಿ‌ನ ದರ ಏರಿಕೆ ಮಾಡುತ್ತೇನೆ, ಜಲಮಂಡಳಿ ಉಳಿಬೇಕು ಅಂದ್ರೆ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow