Bigg Boss ಗೆದ್ದ ಹಳ್ಳಿ ಹುಡುಗ ಹನುಮಂತ! ರನ್ನರ್ ಅಪ್ ತ್ರಿವಿಕ್ರಮ್..!

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಯಾರು ಗೆಲ್ಲುತ್ತಾರೆ, 50 ಲಕ್ಷ ರೂಪಾಯಿ ಹಣವನ್ನು ಯಾರು ತೆಗೆದುಕೊಂಡು ಹೋಗುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿತ್ತು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದಿದ್ದ ಹನುಮಂತ ವಿನ್ನರ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಬಿಗ್ ಬಾಸ್ ಆಟ ಶುರುವಾಗಿ 4 ವಾರ ಕಳೆದ ಮೇಲೆ ಸ್ಪರ್ಧಿಯಾಗಿ ದೊಡ್ಮನೆಗೆ ಹನುಮಂತ ಕಾಲಿಟ್ಟರು. ಮನೆಯ ಜಗಳ ನೋಡಿ ಹನುಮಂತು ಬೆಚ್ಚಿಬಿದ್ದಿದ್ದರು. ಆದರೂ ಛಲ ಬಿಡದೇ ಘಟಾನುಘಟಿ ಸ್ಪರ್ಧಿಗಳನ್ನು ಹಿಂದಿಕ್ಕಿ ಫಿನಾಲೆಗೆ ಮೊದಲು ಆಯ್ಕೆಯಾದರು. ಈಗ ಪರಾಕ್ರಮ ಮೆರೆದ ತ್ರಿವಿಕ್ರಮ್ಗೆ ಮಣ್ಣು ಮುಕ್ಕಿಸಿ ವಿನ್ನರ್ ಆಗಿ ಹನುಮಂತು ಹೊರಹೊಮ್ಮಿದ್ದಾರೆ. ಜೊತೆಗೆ 50 ಲಕ್ಷ ರೂಪಾಯಿ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಹನುಮಂತ ವಿನ್ನರ್ ಆಗಿ ಹೊರಹೊಮ್ಮಿದ್ರೆ, ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿಯಾಗಿ ಗುರುತಿಸಿಕೊಳ್ಳುತ್ತಿದ್ದರು. ಆದರೆ ಫಿನಾಲೆಯಲ್ಲಿ ತ್ರಿವಿಕ್ರಮ್ ಮುಗ್ಗರಿಸಿರೋದು ಫ್ಯಾನ್ಸ್ಗೆ ನಿರಾಸೆಯುಂಟು ಮಾಡಿದೆ.
ಇನ್ನೂ ಭವ್ಯಾ ಜೊತೆಗಿನ ಲವ್ವಿ ಡವ್ವಿ ವಿಚಾರವಾಗಿ ಅವರು ಹೈಲೆಟ್ ಆಗಿದ್ದರು. ಅದಷ್ಟೇ ಅಲ್ಲ, ನಮ್ಮೀಬ್ಬರ ನಡುವೆ ಸ್ನೇಹ ಮಾತ್ರ ಎಂದಿದ್ದ ತ್ರಿವಿಕ್ರಮ್ ಇತ್ತೀಚೆಗೆ ಭವ್ಯಾಗೆ ಪ್ರಪೋಸ್ ಕೂಡ ಮಾಡಿದ್ದರು. ಇದು ಅವರ ಆಟಕ್ಕೆ ಅಡ್ಡಿ ಆಯ್ತು ಎಂಬುದು ಅಭಿಮಾನಿಗಳ ಅನಿಸಿಕೆ.
ನಿಮ್ಮ ಪ್ರತಿಕ್ರಿಯೆ ಏನು?






