BMTC ಡ್ರೈವರ್ ಗೆ ಚಪ್ಪಲಿಯಿಂದ ಹಲ್ಲೆ: ಮಹಿಳೆ ವಿರುದ್ಧ ದೂರು ದಾಖಲು!

ಬೆಂಗಳೂರು:- BMTC ಡ್ರೈವರ್ ಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಮಹಿಳೆ ವಿರುದ್ಧ ಬೆಳ್ಳಂದೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾವ್ಯ ಎಂಬ ಮಹಿಳೆಯಿಂದ ಈ ಕೃತ್ಯ ನಡೆದಿದ್ದು, ಜೂ. 11ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಳಗ್ಗೆ 8.40ರ ಹೊತ್ತಿಗೆ ಬಸ್ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿ ಸಮೀಪ ತಲುಪಿದಾಗ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಕಾವ್ಯ ಎಂಬ ಮಹಿಳೆ, ಬಸ್ ಸ್ಟಾಪ್ ಇಲ್ಲದೇ ಇದ್ರೂ, ಎಲೆಕ್ಟ್ರಾನಿಕ್ ಸಿಟಿ ರಸ್ತೆಯಲ್ಲಿ ಹೋಗುವಾಗ ಕಚೇರಿ ಮುಂದೆ ಬಸ್ ನಿಲ್ಲಿಸಲು ಹೇಳಿದ್ದಳು.
ಟ್ರಾಫಿಕ್ನಿಂದ ಬಸ್ ಡ್ರೈವರ್ ಬಸ್ ನಿಲ್ಲಿಸಿಲ್ಲ. ಆಗ ಹೊಟ್ಟೆ ಹಿಡಿದುಕೊಂಡು ಕಿರುಚಿ, ಅವಾಚ್ಯ ಶಬ್ದಗಳಿಂದ 42 ವರ್ಷದ ಚಾಲಕ ಅತಹರ್ ಹುಸೇನ್ ಅವರನ್ನು ನಿಂದಿಸಿದ್ದಳು. ಬಳಿಕ ಮಹಿಳೆ ಬಲ ಚಪ್ಪಲಿ ತೆಗೆದುಕೊಂಡು ಹೊಡೆದಿದ್ದಾಳೆ ಎಂದು ದೂರು ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






