Booker Prize 2025: ಕನ್ನಡದ ಹಿರಿಮೆಯನ್ನು ಬಾನೆತ್ತರಕ್ಕೆ ಏರಿಸಿದ “ಬಾನು ಮುಷ್ತಾಕ್” ಬಗ್ಗೆ ನಿಮಗೆಷ್ಟು ಗೊತ್ತು..?

ಬೆಂಗಳೂರು: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ.
ಮೂಲತಃ ಹಾಸನದವರೇ ಆದ ಬಾನು ಮುಷ್ತಾಕ್ ಬೆಳೆದದ್ದು ಹಾಸನದಲ್ಲಿಯೇ. ಅರಸೀಕೆರೆಯಲ್ಲಿ ಶಾಲೆಗೆ ಸೇರಿದ ಬಾನುಗೆ ಉರ್ದು ಮಾತ್ರ ತಲೆಗೆ ಹೋಗಲಿಲ್ಲ. ಹೀಗಾಗಿ ಅವರ ಪೋಷಕರು ಕನ್ನಡವನ್ನಾದರೂ ಕಲಿಯಲಿ ಎಂದು ಆಕೆಯನ್ನು ಶಿವಮೊಗ್ಗದ ಕ್ರಿಶ್ಚಿಯನ್ ಕಾನ್ವೆಂಟ್ ಶಾಲೆಗೆ ಸೇರಿಸುತ್ತಾರೆ. ಬಳಿಕ ಪದವಿವರೆಗೂ ವ್ಯಾಸಂಗ ಮಾಡುತ್ತಾರೆ.
ಮುಂದೆ ವೃತ್ತಿಯಲ್ಲಿ ವಕೀಲೆಯಾದ ಬಾನು ಮುಷ್ತಾಕ್ ಅವರು, ಮುಸ್ಮಿಂ ಮಹಿಳೆಯ ಪರವಾಗಿ ತಮ್ಮ ಧ್ವನಿ ಎತ್ತುತ್ತಾರೆ. ಸಾಕಷ್ಟು ಮುಸ್ಮಿಂ ಮಹಿಳೆ ಕೇಸ್ಗಳನ್ನು ವಾದಿಸುತ್ತಾರೆ. ಓರ್ವ ಮುಸ್ಮಿಂ ಯುವತಿ ಸಿನಿಮಾ ನೋಡಿದ್ದಕ್ಕೆ ಆಕೆಯ ವಿರುದ್ಧ ಫತ್ವಾ ಹೊರಡಿಸಲಾಗಿತ್ತು. ಇದನ್ನು ಖಂಡಿಸುವುದು ಮಾತ್ರವಲ್ಲದೇ ಲಂಕೇಶ್ ಪತ್ರಿಕೆಗೆ ಬರೆಯುವ ಮೂಲಕ ಮಾಧ್ಯಮ ಲೋಕಕ್ಕೂ ಪಾದಾರ್ಪಣೆ ಮಾಡುತ್ತಾರೆ.
ಬಾನು ಮುಷ್ತಾಕ್ ಅವರು ಒಂದು ರೀತಿ ಬಹುಮುಖ ಪ್ರತಿಭೆ ಎಂದೇ ಹೇಳಬಹುದು. ಏಕೆಂದರೆ ಸಾಮಾಜಿಕ ಕಾರ್ಯಕರ್ತೆ, ಮಹಿಳಾಪರ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿ, ಪತ್ರಕರ್ತೆಯಾಗಿ ಗಮನ ಸೆಳೆದಿದ್ದಾರೆ. ಇಂತವರು ಮಾತ್ರ ಸಾಹಿತಿಗಳಾಗುವುದಕ್ಕೆ ಸಾಧ್ಯ ಎನ್ನುವ ಸಂದರ್ಭದಲ್ಲಿ ಅದೆಲ್ಲವನ್ನು ಮೀರಿ ಬಾನು ಮುಷ್ತಾಕ್ ಸಾಹಿತ್ಯ ಲೋಕಕ್ಕೆ ಎಂಟ್ರಿ ಕೊಡುತ್ತಾರೆ.
ಬಾಲ್ಯದಲ್ಲೇ ಬಾನು ಮುಷ್ತಾಕ್ ಅವರು ಬರೆವಣಿಗೆಯನ್ನು ರೂಢಿಸಿಕೊಂಡಿದ್ದರು. ಇದೇ ಅವರಿಗೆ ಸಾಹಿತ್ಯ ಲೋಕಕ್ಕೆ ಬರಲು ಸಾಧ್ಯವಾಯಿತು. ತಮ್ಮ ವೃತ್ತಿ ಬದುಕಿನ ಜೊತೆಜೊತೆಗೆ ಸಾಹಿತ್ಯಿಕವಾಗಿಯೂ ಸಾಕಷ್ಟು ಕೆಲಸ ಮಾಡಿದ್ದಾರೆ. ಕಥೆ, ಕಾದಂಬರಿಗಳು, ಪ್ರಬಂಧಗಳನ್ನು ಬರೆಯುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ.
ಇನ್ನು ಇವರಿಗೆ ಸಾಕಷ್ಟು ಪ್ರಶಸ್ತಿಗಳು ಕೂಡ ಒಲಿದು ಬಂದಿವೆ. ಬಾನು ಮುಷ್ತಾಕ್ ಅವರ ‘ಹಸೀನ ಮತ್ತು ಇತರೆ ಕತೆಗಳು’ ಕೃತಿಯನ್ನು ಪತ್ರಕರ್ತೆ ದೀಪಾ ಭಕ್ತಿಯವರು ‘ಹಾರ್ಟ್ ಲ್ಯಾಂಪ್’ ಎಂದು ಇಂಗ್ಲಿಷ್ಗೆ ಅನುವಾದಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






