BREAKING: ನಿರ್ಮಲಾ ಸೀತಾರಾಮನ್, ಬಿ ವೈ ವಿಜಯೇಂದ್ರ ಸೇರಿ ಹಲವರ ವಿರುದ್ಧ FIR ದಾಖಲು!

ಸೆಪ್ಟೆಂಬರ್ 28, 2024 - 16:31
 0  8
BREAKING: ನಿರ್ಮಲಾ ಸೀತಾರಾಮನ್, ಬಿ ವೈ ವಿಜಯೇಂದ್ರ ಸೇರಿ ಹಲವರ ವಿರುದ್ಧ FIR ದಾಖಲು!

 

ಬೆಂಗಳೂರುಚುನಾವಣಾ ಬಾಂಡ್ ಗಳ ಮೂಲಕ ಕಾರ್ಪೊರೇಟ್ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ಜನಪರ ಸಂಘಟನೆಯೊಂದು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯ ಬಿಜೆಪಿಯ ಹಿಂದಿನ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಈಗಿನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶಿಸಿತ್ತು.

ಇದರ ಬೆನ್ನಲ್ಲೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ದಾಖಲಾಗಿದೆ. ನಿರ್ಮಲಾ ಸೀತಾರಾಮನ್ಸೇರಿ ಹಲವರು ಚುನಾವಣಾ ಬಾಂಡ್ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ಆದರ್ಶ್ಐಯ್ಯರ್ದೂರು ನೀಡಿದ್ದರು.

 ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ದಾಖಲಿಸಲು ಆದೇಶಿಸಿತ್ತು. ಆದೇಶದ ಬೆನ್ನಲ್ಲೇ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಒಟ್ಟು ಐವರ ಮೇಲೆ ಎಫ್ಐಆರ್ ದಾಖಲಾಗಿದ್ದು, ಸೀತಾರಾಮನ್ ಅವರು 1 ಆರೋಪಿಯಾಗಿದ್ದಾರೆ.

 ಇಡಿ ಅಧಿಕಾರಿಗಳು 2, ಕೇಂದ್ರ ಬಿಜೆಪಿ ಪದಾಧಿಕಾರಿಗಳು 3, ನಳಿನ್ಕುಮಾರ್ಕಟೀಲ್4, ಬಿ.ವೈ.ವಿಜಯೇಂದ್ರ 5, ರಾಜ್ಯ ಬಿಜೆಪಿ ಪದಾಧಿಕಾರಿಗಳು 6 ಆರೋಪಿಗಳಾಗಿದ್ದಾರೆ. ಐಪಿಸಿ ಸೆಕ್ಷನ್‌ 384 (ಸುಲಿಗೆ), 120b (ಅಪರಾಧಿಕ ಒಳಸಂಚು), 34 (ಸಮಾನ ಉದ್ದೇಶ) ಮೇಲೆ ಕೇಸ್ದಾಖಲಾಗಿದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow