Channapatna ಉಪಚುನಾವಣೆಯಲ್ಲಿ ಸೋಲು: ನಿಖಿಲ್ ಅಭಿಮಾನಿ ಆತ್ಮಹತ್ಯೆಗೆ ಯತ್ನ!

ಮಂಡ್ಯ: ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೂ, ಚನ್ನಪಟ್ಟಣದಲ್ಲಿ ಈ ಬಾರಿ ಜಿದ್ದಾಜಿದ್ದಿ ಜೋರಾಗಿತ್ತು. ಕಾಂಗ್ರೆಸ್ ರೂಪಿಸಿದ ಚಕ್ರವ್ಯೂಹ ಬೇಧಿಸುವಲ್ಲಿ ನಿಖಿಲ್ ಕುಮಾರಸ್ವಾಮಿ 3ನೇ ಬಾರಿ ವಿಫಲರಾಗಿದ್ದಾರೆ. ಈ ಮೂಲಕ ಯೋಗೇಶ್ವರ್ ಅಂದು ತಾಯಿಯನ್ನು ಸೋಲಿಸಿದ್ದ ಯೋಗೇಶ್ವರ್ ಈಗ ಪುತ್ರನನ್ನು ಸೋಲಿಸಿ ಮನೆಗೆ ಕಳುಹಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ 1,12,642 ಮತಗಳನ್ನು ಪಡೆದು 25,413 ಮತಗಳ ಅಂತರದಿಂದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು (87,229 ಮತ) ಸೋಲಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ವ್ಯಕ್ತಿಗೆ ಮಂಡ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದ ಮಂಜುನಾಥ್ ಎಂಬ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದವರು. ‘ನಾನು ನಿಖಿಲ್ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ, ಜೈ ಜೆಡಿಎಸ್’ ಎಂದು ಪತ್ರ ಬರೆದಿಟ್ಟು ಅವರು ವಿಷ ಸೇವನೆ ಮಾಡಿಕೊಂಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮಂಜುನಾಥ್ ಅವರನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






