Chikkamagaluru Travel: ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ! ಯಾಕೆ ಗೊತ್ತಾ..?

ಚಿಕ್ಕಮಗಳೂರು: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಪ್ರವಾಸ ಕೈಗೊಳ್ಳಬೇಕು ಎಂದು ಪ್ಲ್ಯಾನ್ ಹಾಕಿಕೊಂಡವರಿಗೆ ಬ್ಯಾಡ್ ನ್ಯೂಸ್. ಮುಳ್ಳಯ್ಯನಗಿರಿ ಭೇಟಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೌದು ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ನ.9 ಹಾಗೂ 10 ರಂದು ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಪ್ರದೇಶದಲ್ಲಿ ಓಡಾಡಲು ದತ್ತ ಮಾಲಾಧಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಮುಳ್ಳಯ್ಯನಗಿರಿ, ದತ್ತಪೀಠ, ದತ್ತಪೀಠ, ಗಾಳಿಕೆರೆ, ಸೀತಾಳಯ್ಯನಗಿರಿ, ಮಾಣಿಕ್ಯಾಧಾರ ತಾಣಗಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. 21ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಚಾಲನೆ ದೊರೆತಿದೆ. ದತ್ತಮಾಲಾಧಾರಿಗಳು ಏಳು ದಿನಗಳ ವ್ರತಾಚರಣೆಯಲ್ಲಿ ಇರಲಿದ್ದಾರೆ. ಈ ಬಾರಿ ದತ್ತ ಮಾಲಾ ಅಭಿಯಾನದಲ್ಲಿ ಬಿಜೆಪಿ ನಾಯಕರು ಸಹ ಭಾಗವಹಿಸಲಿದ್ದಾರೆ. ಜಿಲ್ಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






