CM vs Governor; ರಾಜ್ಯಪಾಲರ ವಿರುದ್ಧ ತೀವ್ರವಾದ ಹೋರಾಟ.!

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ (CM vs Governor) ವಿರುದ್ಧ ಹೋರಾಟ ತೀವ್ರಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯಪಾಲರ ನಡೆ ಖಂಡಿಸಿ ರಾಜ್ಯಾದ್ಯಂತ ಸೋಮವಾರ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್, ಇದೀಗ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು, ದೂರು ಕೊಡಲು ಚಿಂತನೆ ನಡೆಸಿದೆ.
ಸಿಎಂ ವಿರುದ್ಧ ಸಂವಿಧಾನಬಾಹಿರವಾಗಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ದೂರು ನೀಡಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಇದರಿಂದ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲರ ಜಟಾಪಟಿ ರಾಷ್ಟ್ರಪತಿಗಳ ಅಂಗಳ ತಲುಪುವ ಸಾಧ್ಯತೆ ಇದೆ.
ನೆನ್ನೆ ಪ್ರತಿಭಟನೆ ಬಳಿಕ ಡಿಸಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ರವಾನಿಸಲಾಗಿತ್ತು. ಇದೀಗ ರಾಜ್ಯಪಾಲರ ಕಚೇರಿ ದುರ್ಬಳಕೆ ಕುರಿತು ದೆಹಲಿಯಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ದೂರು ನೀಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಚರ್ಚೆ ಸಿಎಂ, ಡಿಸಿಎಂ ಸೇರಿ ಹಿರಿಯ ಸಚಿವರು ಚರ್ಚೆ ನಡೆಸಿದ್ದಾರೆ
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






