CM ಸಿದ್ದು ಪತ್ನಿಗೆ ತಪ್ಪದ ಮುಡಾ ಸಂಕಷ್ಟ: ಪಾರ್ವತಿ ಮೇಲೆ ಸಿವಿಲ್ ಕೇಸ್ ದಾಖಲು!

ಮೈಸೂರು:- ಮೈಸೂರಿನಲ್ಲಿ ನಡೆದಿದೆ ಎನ್ನಲಾದ ಮುಡಾ ಹಗರಣ ಪ್ರಕರಣವು ಕೇವಲ ಕರ್ನಾಟಕ ಮಾತ್ರವಲ್ಲದೇ ಇಡೀ ದೇಶಾದ್ಯಂತ ಚರ್ಚೆಯಲ್ಲಿದೆ. ಅಲ್ಲದೇ ತಮ್ಮ 40 ವರ್ಷ ರಾಜಕೀಯದಲ್ಲಿ ಒಂದು ಕಪ್ಪು ಮಾರ್ಕ್ ತೆಗೆದುಕೊಳ್ಳದ CM ಸಿದ್ದರಾಮಯ್ಯಗೆ ಅಕ್ಷರಸಹ ಬಿಸಿ ತುಪ್ಪ ನುಂಗಲಾರದ ಸ್ಥಿತಿ ನಿರ್ಮಾಣ ಆಗಿತ್ತು.
ಇದೀಗ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿವಿಲ್ ಕೇಸ್ ದಾಖಲಾಗಿದೆ.
ಜಮೀನು ಮಾಲೀಕ ದೇವರಾಜು ವಿರುದ್ಧ ಅಣ್ಣನ ಮಗಳು ಜಮುನಾ ಮೈಸೂರಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರ ಹೆಸರಿನಲ್ಲಿರುವ ಜಮೀನು ದೇವರಾಜು ಅವರದ್ದು ಅಲ್ಲ, ಬದಲಿಗೆ ನಮ್ಮ ತಂದೆ ಮೈಲಾರಯ್ಯ ಅವರಿಗೆ ಸೇರಿದ್ದು ಎಂದು ಜಮುನಾ ದಾವೆ ಹೂಡಿದ್ದಾರೆ. ಮುಖ್ಯಮಂತ್ರಿ
ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ 12 ಜನರ ಮೇಲೆ ಸಿವಿಲ್ ಕೇಸ್ ದಾಖಲಿಸಿದ್ದಾರೆ.
ಈ ವಿಚಾರವಾಗಿ ಜಮುನಾ ಸಹೋದರ ಮಂಜುನಾಥಸ್ವಾಮಿ ಮಾತನಾಡಿ, “ನಮ್ಮ ಚಿಕ್ಕಪ್ಪ ದೇವರಾಜು ಮೋಸದಿಂದ ಜಮೀನು ಮಾರಾಟ ಮಾಡಿದ್ದಾರೆ. ಜಮೀನು ಮೊದಲು ನನ್ನ ತಂದೆ ಮೈಲಾರಯ್ಯ ಅವರ ಹೆಸರಿನಲ್ಲಿ ಇತ್ತು. ನಮ್ಮ ಹೆಸರಿಗೆ ಮಾಡಿಸಿಕೊಡುತ್ತೇನೆ ಎಂದು ನಮ್ಮ ಚಿಕ್ಕಪ್ಪ ದೇವರಾಜು ನನ್ನ ಹಾಗೂ ತಾಯಿ ಬಳಿ ಸಹಿ ಪಡೆದುಕೊಂಡರು. ನನ್ನ ರೀತಿ ನನ್ನ ಸಹೋದರಿ ಜಮುನಾಗು ಅನ್ಯಾಯವಾಗಿದೆ” ಎಂದು ಅಳಲು ತೋಡಿಕೊಂಡರು.
ನಿಮ್ಮ ಪ್ರತಿಕ್ರಿಯೆ ಏನು?






