Crime News: ಬೆಚ್ಚಿಬೀಳೀಸುವ ಘಟನೆ: 7 ವರ್ಷದ ಮಗು ಸೇರಿ ನಾಲ್ವರ ಭೀಕರ ಹತ್ಯೆ..!

ಕೊಡಗು ಜಿಲ್ಲೆಯಲ್ಲಿ ಬೆಚ್ಚಿಬೀಳೀಸುವ ಘಟನೆಯೊಂದು ನಡೆದಿದೆ. ಕತ್ತಿಯಿಂದ ಹೊಡೆದು ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆಯ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದವರನ್ನು ಕರಿಯ (75) ಗೌರಿ (70) ನಾಗಿ (35) ಹಾಗೂ ಕಾವೇರಿ (7) ಎಂದು ಗುರುತಿಸಲಾಗಿದೆ. ಗಿರೀಶ್ (35) ಹತ್ಯೆಗೈದ ಆರೋಪಿಯಾಗಿದ್ದಾನೆ. ಆತ ಪರಾರಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಾಗಿಯೊಂದಿಗೆ ಗಿರೀಶ್ 3ನೇ ಮದುವೆಯಾಗಿ ತೋಟದ ಮನೆಯಲ್ಲಿ ಜೀವನ ನಡೆಸುತ್ತಿದ್ದನು. ಇನ್ನೂ ಕಾಫಿ ಬೀಜ ಮಾರಾಟ ಮಾಡಿ ಬಂದ ಹಣದ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆ ಗಲಾಟೆ ನಡೆದಿತ್ತು.
ಆದರೆ ಈ ಕೃತ್ಯ ಯಾಕೆ ಮಾಡಿದ್ದಾನೆ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ನಾಲ್ವರ ಜೀವ ತೆಗೆದಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊನ್ನಂಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಘಟನೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿ ಪರಾರಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






