Crime News: ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಕೊಲೆ!

ರಾಮನಗರ:- ಹಾರೋಹಳ್ಳಿ ಪಟ್ಟಣದ ಕೆಎಸ್ಆರ್ಟಿಸಿ ಬಸ್ ಡಿಪೋ ಬಳಿ ಹಾಡಹಗಲೇ ರೌಡಿಶೀಟರ್ವೊಬ್ಬನನ್ನ ಲಾಂಗು, ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜರುಗಿದೆ.
ಬೆಂಗಳೂರಿನ ಕೋಣನಕುಂಟೆ ನಿವಾಸಿ ರೌಡಿಶೀಟರ್ ಸಂತೋಷ್ (33) ಅಲಿಯಾಸ್ ಕರಡಿ ಹತ್ಯೆಯಾದ ವ್ಯಕ್ತಿ. ಹಳೇ ವೈಷಮ್ಯಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಾರಿನಿಂದ ಬೈಕ್ಗೆ ಗುದ್ದಿ ಆತ ಕೆಳಗೆ ಬಿದ್ದ ಬಳಿಕ ಲಾಂಗು ಮಚ್ಚು ಹಿಡಿದು ಅಟ್ಟಾಡಿಸಿರೋ ನಾಲ್ವರು ದುಷ್ಕರ್ಮಿಗಳು ಬರ್ಬರವಾಗಗಿ ಹತ್ಯೆ ಮಾಡಿದ್ದಾರೆ.
ಘಟನೆ ಸಂಬಂಧ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






