DA Hike 2025: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಶೇ. 2 ರಷ್ಟು ಡಿಎ ಹೆಚ್ಚಳ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿತು. ಸಂಪುಟ ಸಭೆಯಲ್ಲಿ ಕೇಂದ್ರ ನೌಕರರಿಗೆ ಸಿಹಿ ಸುದ್ದಿ ನೀಡಲಾಯಿತು. ಇದು ಬರಗಾಲ ಭತ್ಯೆಯಲ್ಲಿ ಶೇಕಡಾ 2 ರಷ್ಟು ಹೆಚ್ಚಳವನ್ನು ಅನುಮೋದಿಸಿದೆ. ಮಾರ್ಚ್ನಲ್ಲಿ ಸರ್ಕಾರ ಬರಗಾಲ ಭತ್ಯೆಯನ್ನು ಹೆಚ್ಚಿಸುವುದಾಗಿ ಘೋಷಿಸಿತು. ಇದರೊಂದಿಗೆ, ಅದನ್ನು 53% ರಿಂದ 55% ಕ್ಕೆ ಹೆಚ್ಚಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು.
ಹೌದು ತುಟ್ಟಿಭತ್ಯೆ ಶೇ.53ರಿಂದ ಶೇ.55ಕ್ಕೇರುತ್ತದೆ. ತುಟ್ಟಿಭತ್ಯೆ ಹೆಚ್ಚಳದಿಂದಾಗಿ 1.5 ಕೋಟಿ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು ಅನುಕೂಲ ಪಡೆದುಕೊಳ್ಳಲಿದ್ದಾರೆ. ಇನ್ನೂ ಕಳೆದ ವರ್ಷ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.50ರಿಂದ ಶೇ.53ಕ್ಕೇರಿಕೆಯಾಗಿತ್ತು. ಇದೀಗ ಸರ್ಕಾರ ಅದನ್ನು ಶೇ.2ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಡಿಎ ಇದೇ ಜನವರಿಯಿಂದ ಅನ್ವಯವಾಗಲಿದ್ದು, ಮಾರ್ಚ್ ತಿಂಗಳ ಸಂಬಳದಲ್ಲಿ ಮೂರು ತಿಂಗಳ ಅರಿಯರ್ಸ್ ಸೇರಿ ಖಾತೆಗೆ ಜಮೆಯಾಗಲಿದೆ.
ಹಣದುಬ್ಬರದಿಂದ ಎದುರಾಗುವ ಸವಾಲುಗಳನ್ನು ಎದುರಿಸಲು ನೌಕರರಿಗೆ ತುಟ್ಟಿಭತ್ಯೆ ನೆರವಾಗುತ್ತದೆ. ಹೆಚ್ಚುತ್ತಿರುವ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ತುಟ್ಟಿಭತ್ಯೆಯು ಸಹಾಯವಾಗುತ್ತದೆ. ವೇತನ ಆಯೋಗದ ಪ್ರಕಾರ, ಪ್ರತಿ 10 ವರ್ಷಕ್ಕೊಮ್ಮೆ ಮೂಲ ವೇತನವು ಪರಿಷ್ಕರಣೆಗೊಂಡರೆ, ತುಟ್ಟಿಭತ್ಯೆಯನ್ನು ಹಣದುಬ್ಬರ ಆಧಾರದ ಮೇಲೆ ಹೊಂದಾಣಿಕೆ ಮಾಡಲಾಗುತ್ತದೆ.
ನಿಮ್ಮ ಪ್ರತಿಕ್ರಿಯೆ ಏನು?






