Darshan: ನಟ ದರ್ಶನ್ʼಗೆ ಜಾಮೀನು ಬೆನ್ನಲ್ಲೇ ವಿಜಯಲಕ್ಷ್ಮಿ ಪೋಸ್ಟ್ ವೈರಲ್!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಈ ಬೆನ್ನಲ್ಲೇ ದರ್ಶನ್ ಪತ್ನಿ ಕೂಡ ರಿಯಾಕ್ಟ್ ಮಾಡಿದ್ದಾರೆ. ದೇವಸ್ಥಾನದಲ್ಲಿ ದೇವರ ಹೂ ಪ್ರಸಾದ ಹಿಡಿದ ಫೋಟೋ ಪೋಸ್ಟ್ ಮಾಡಿ ಖುಷಿ ವ್ಯಕ್ತಪಡಿಸಿದ್ದಾರೆ. ದರ್ಶನ್ಗೆ ಜಾಮೀನು ಸಿಕ್ಕ ಬೆನ್ನಲ್ಲೇ ವಿಜಯಲಕ್ಷ್ಮಿ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟೀವ್ ಆಗಿದ್ದಾರೆ. ದೇವಸ್ಥಾನದಲ್ಲಿ ದೇವರ ಹೂ ಪ್ರಸಾದ ಹಿಡಿದ ಫೋಟೋ ವಿಜಯಲಕ್ಷ್ಮಿ ಇನ್ಸ್ಟಾಗ್ರಾಂ ಪೋಸ್ಟ್ ಮಾಡಿದ್ದಾರೆ. ದೇವರಿಗೆ ಪ್ರಾರ್ಥನೆ ಫಲಿಸಿತು ಎಂಬ ಅರ್ಥದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






