Darshan Case: ದರ್ಶನ್ ಬೇಲ್ ವಿಚಾರ: ನಟ ದರ್ಶನ್ ಸೇರಿ 7 ಆರೋಪಿಗಳಿಗೆ ನೊಟೀಸ್ ನೀಡಿದ ಸುಪ್ರೀಂ!

ಜನವರಿ 24, 2025 - 14:00
 0  22
Darshan Case: ದರ್ಶನ್ ಬೇಲ್ ವಿಚಾರ: ನಟ ದರ್ಶನ್ ಸೇರಿ 7 ಆರೋಪಿಗಳಿಗೆ ನೊಟೀಸ್ ನೀಡಿದ ಸುಪ್ರೀಂ!

ಸ್ಯಾಂಡಲ್​ವುಡ್ ನಟ ದರ್ಶನ್ ಅವರಿಗೆ ಬಿಗ್​ ಶಾಕ್ ಸಿಕ್ಕಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ನೀಡಿದ ಜಾಮೀನನ್ನು ಬೆಂಗಳೂರು ಪೊಲೀಸರು ಪ್ರಶ್ನಿಸಿದ್ದ ಹಿನ್ನೆಲೆಯಲ್ಲಿ ಈ ನೋಟಿಸ್ ಜಾರಿಯಾಗಿದೆ. ಸರ್ಕಾರಿ ವಕೀಲರು ಆರೋಪಿಗಳ ಅಮಾನವೀಯ ನಡವಳಿಕೆಯನ್ನು ಪ್ರಸ್ತಾಪಿಸಿದ್ದಾರೆ. ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.

ಹೌದು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಕೋರ್ಟ್ ವಿಚಾರಣೆಯನ್ನು ಮುಂದೂಡಿತು. ಮುಂದಿನ ವಿಚಾರಣೆಯಲ್ಲಿ ಎರಡು ಕಡೆಯ ವಾದವನ್ನು ಆಲಿಸಿ, ನಂತರ ಕೋರ್ಟ್‌ ತನ್ನ ಆದೇಶವನ್ನು ಪ್ರಕಟಿಸಲಿದೆ.

ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆದೇಶ ಪ್ರತಿ, ದರ್ಶನ್‌ಗೆ ನೀಡಿದ್ದ ಮಧ್ಯಂತರ ಜಾಮೀನು ಅದೇಶ ಪ್ರತಿ, ಜೈಲಿನಿಂದ ದರ್ಶನ್ ಬಗ್ಗೆ ಸಲ್ಲಿಕೆಯಾದ ವೈದ್ಯಕೀಯ ವರದಿ, ಬಿಜಿಎಸ್ ಆಸ್ಪತ್ರೆ ವೈದ್ಯರ ವರದಿ ಸೇರಿದಂತೆ ಒಟ್ಟು 15 ಅಂಶಗಳಿಗೆ ಸಂಬಂಧಿಸಿ ಒಟ್ಟು 1492 ಪುಟಗಳ ಕಡತವನ್ನು ಕೋರ್ಟ್‌ಗೆ ನೀಡಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow