Darshan Case: ಜೈಲಲ್ಲಿ ಖೈದಿಗಳು ಸಿಗರೇಟ್ ಸೇದುವ ಹಾಗಿಲ್ಲ; ಸುಪ್ರೀಂ ಖಡಕ್ ವಾರ್ನಿಂಗ್
ಬೆಂಗಳೂರು: ರೇಣುಕಾಸ್ವಾಮಿ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ಅನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ, ಆರ್. ಮಹಾದೇವನ್ ಪೀಠ ಈ ಮಹತ್ವದ ಆದೇಶ ನೀಡಿದ್ದಾರೆ. ಅಲ್ಲದೇ ಈ ಕೂಡಲೇ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳು ಜೈಲಿಗೆ ಹೋಗಬೇಕಿದೆ.
ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಪ್ರಕರಣ ವಿಚಾರಣೆ ಮಾಡಿದ್ದು, ಆರೋಪಿ ಎಷ್ಟೇ ದೊಡ್ಡವರಿದ್ದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಹೇಳಿದರು.
ಇನ್ನು ಮುಂದೆ ರಾಜ್ಯಾತಿಥ್ಯದ ಯಾವುದೇ ಫೋಟೋ, ವಿಡಿಯೋ ಕಂಡು ಬಂದರೆ, ಆರೋಪಿ ಜೈಲಿನ ಲಾನ್ನಲ್ಲಿ ಕುಳಿತು ಸಿಗರೇಟ್ ಸೇದಿದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಇದು ಲ್ಯಾಂಡ್ ಮಾರ್ಕ್ ತೀರ್ಪು. ಈ ತೀರ್ಪಿನ ಪ್ರತಿ ಎಲ್ಲಾ ಹೈಕೋರ್ಟ್ಗಳಿಗೆ ಮತ್ತು ಜೈಲುಗಳಿಗೂ ಕಳುಹಿಸುವಂತೆ ಸುಪ್ರೀಂಕೋರ್ಟ್ ಖಡಕ್ ಸೂಚನೆ ನೀಡಿದೆ.
ನಿಮ್ಮ ಪ್ರತಿಕ್ರಿಯೆ ಏನು?