Darshan: ದರ್ಶನ್, ಪವಿತ್ರಾ ಗೌಡ ಪಾಲಿಗೆ ಇಂದು ಬಿಗ್ ಡೇ! “ದಾಸ”ನಿಗೆ ಬೇಲಾ? ಜೈಲಾ?

ಡಿಸೆಂಬರ್ 13, 2024 - 10:49
 0  19
Darshan: ದರ್ಶನ್, ಪವಿತ್ರಾ ಗೌಡ ಪಾಲಿಗೆ ಇಂದು ಬಿಗ್ ಡೇ! “ದಾಸ”ನಿಗೆ ಬೇಲಾ? ಜೈಲಾ?

 

ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್​ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿತ್ತು. ಆದ್ರೆ ಇಂದು ಮಧ್ಯಾಹ್ನ ತೀರ್ಪು ಪ್ರಕಟವಾಗಲಿದೆ. ಈ ಎಲ್ಲ ಆರೋಪಿಗಳ ಜಾಮೀನು ಅರ್ಜಿಯ ತೀರ್ಪು ಹೊರಬರಲಿದೆ. ಆರೋಪಿಗಳಿಗೆ ಜಾಮೀನು ಕೊಡಿಸಲು ಅವರ ಪರ ವಕೀಲರು ಪ್ರಯತ್ನಿಸಿದ್ದಾರೆ.

ಜಾಮೀನು ನೀಡಬಾರದು ಎಂದು ಎಸ್​ಪಿಪಿ ಪ್ರಸನ್ನ ಕುಮಾರ್​ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ಹೈಕೋರ್ಟ್​ ತೀರ್ಪು ಕಾಯ್ದಿರಿಸಿದ್ದು, ಶುಕ್ರವಾರ ಮಧ್ಯಾಹ್ನ ತೀರ್ಪು ಪ್ರಕಟವಾಗಲಿದೆ. ಅದಕ್ಕಾಗಿ ಎಲ್ಲರೂ ಕಾದಿದ್ದಾರೆ.

ಮಧ್ಯಾಹ್ನ 2.30ಕ್ಕೆ ದರ್ಶನ್​, ನಾಗರಾಜ್​, ಪವಿತ್ರಾ ಗೌಡ, ಲಕ್ಷ್ಮಣ್ ಎಂ, ಜಗದೀಶ್, ಪ್ರದೋಶ್‌ ರಾವ್, ಅನುಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪು ಪ್ರಕಟ ಆಗಲಿದ್ದು, ಎಲ್ಲರ ಗಮನ ಈ ತೀರ್ಪಿನ ಕಡೆಗಿದೆ. ಹೈಪ್ರೊಫೈಲ್ ಕೇಸ್​ ಆದ್ದರಿಂದ ಹೆಚ್ಚು ಸುದ್ದಿಯಾಗಿದೆ. ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಏಕಸದಸ್ಯ ಪೀಠದಲ್ಲಿ ತೀರ್ಪು ಬರಲಿದೆ.

ಈ ಕೇಸ್​ನಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಎ2 ದರ್ಶನ್​ಗೆ ಬೆನ್ನು ನೋವು ಇರುವ ಕಾರಣಕ್ಕೆ ಮಧ್ಯಂತರ ಜಾಮೀನು ನೀಡಿ, ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಅವರ ಶಸ್ತ್ರಚಿಕಿತ್ಸೆ ವಿಳಂಬ ಆಗುತ್ತಿದೆ. ಮುಂದಿನ ಆದೇಶದ ತನಕ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್​ ವಿಸ್ತರಿಸಿದೆ. ಶುಕ್ರವಾರ ಪ್ರಕಟ ಆಗಲಿರುವ ತೀರ್ಪಿನ ಮೇಲೆ ದರ್ಶನ್, ಪವಿತ್ರಾ ಗೌಡ ಮುಂತಾದವರು ಭವಿಷ್ಯ ನಿರ್ಧಾರ ಆಗಲಿದೆ.

 

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow