Darshan: ದರ್ಶನ್, ಪವಿತ್ರಾ ಗೌಡ ಪಾಲಿಗೆ ಇಂದು ಬಿಗ್ ಡೇ! “ದಾಸ”ನಿಗೆ ಬೇಲಾ? ಜೈಲಾ?

ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿತ್ತು. ಆದ್ರೆ ಇಂದು ಮಧ್ಯಾಹ್ನ ತೀರ್ಪು ಪ್ರಕಟವಾಗಲಿದೆ. ಈ ಎಲ್ಲ ಆರೋಪಿಗಳ ಜಾಮೀನು ಅರ್ಜಿಯ ತೀರ್ಪು ಹೊರಬರಲಿದೆ. ಆರೋಪಿಗಳಿಗೆ ಜಾಮೀನು ಕೊಡಿಸಲು ಅವರ ಪರ ವಕೀಲರು ಪ್ರಯತ್ನಿಸಿದ್ದಾರೆ.
ಜಾಮೀನು ನೀಡಬಾರದು ಎಂದು ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಶುಕ್ರವಾರ ಮಧ್ಯಾಹ್ನ ತೀರ್ಪು ಪ್ರಕಟವಾಗಲಿದೆ. ಅದಕ್ಕಾಗಿ ಎಲ್ಲರೂ ಕಾದಿದ್ದಾರೆ.
ಮಧ್ಯಾಹ್ನ 2.30ಕ್ಕೆ ದರ್ಶನ್, ನಾಗರಾಜ್, ಪವಿತ್ರಾ ಗೌಡ, ಲಕ್ಷ್ಮಣ್ ಎಂ, ಜಗದೀಶ್, ಪ್ರದೋಶ್ ರಾವ್, ಅನುಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪು ಪ್ರಕಟ ಆಗಲಿದ್ದು, ಎಲ್ಲರ ಗಮನ ಈ ತೀರ್ಪಿನ ಕಡೆಗಿದೆ. ಹೈಪ್ರೊಫೈಲ್ ಕೇಸ್ ಆದ್ದರಿಂದ ಹೆಚ್ಚು ಸುದ್ದಿಯಾಗಿದೆ. ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಏಕಸದಸ್ಯ ಪೀಠದಲ್ಲಿ ತೀರ್ಪು ಬರಲಿದೆ.
ಈ ಕೇಸ್ನಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಎ2 ದರ್ಶನ್ಗೆ ಬೆನ್ನು ನೋವು ಇರುವ ಕಾರಣಕ್ಕೆ ಮಧ್ಯಂತರ ಜಾಮೀನು ನೀಡಿ, ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಅವರ ಶಸ್ತ್ರಚಿಕಿತ್ಸೆ ವಿಳಂಬ ಆಗುತ್ತಿದೆ. ಮುಂದಿನ ಆದೇಶದ ತನಕ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ವಿಸ್ತರಿಸಿದೆ. ಶುಕ್ರವಾರ ಪ್ರಕಟ ಆಗಲಿರುವ ತೀರ್ಪಿನ ಮೇಲೆ ದರ್ಶನ್, ಪವಿತ್ರಾ ಗೌಡ ಮುಂತಾದವರು ಭವಿಷ್ಯ ನಿರ್ಧಾರ ಆಗಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






