Darshan: ದರ್ಶನ್ ಪಾಲಿಗೆ ಕನಸಾಯ್ತು ಬೇಲ್! ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ವೇಳೆ ನಟ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್, ದರ್ಶನ್ ಗೆ ಡಿಸ್ಕ್ ಸಮಸ್ಯೆಯಿದೆ. ತಕ್ಷಣ ಸರ್ಜರಿ ಅಗತ್ಯವಿದೆ. ಸರ್ಜರಿ ಮಾಡಿಸದಿದ್ದಲ್ಲಿ ದರ್ಶನ್ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ. ಹಾಗಾಗಿ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು.
ಅಲ್ಲದೇ ನ್ಯೂರೋ ಸರ್ಜನ್ ಹೇಳಿರುವ ಕೆಲ ಅಂಶಗಳನ್ನು ಉಲ್ಲೇಖಿಸಿ, ಜಾಮೀನು ಮಂಜೂರು ಮಾಡುವಂತೆ ವಾದ ಮಂಡಿಸಿದರು. ಈ ವೇಳೆ ಎಸ್ ಪಿಪಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್, ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇನ್ನೂ ಇಂದು ದರ್ಶನ್ ಪತ್ನಿ, ಆಪ್ತರು ಬಳ್ಳಾರಿ ಜೈಲಿಗೆ ಭೇಟಿ ನೀಡುವ ಸಾಧ್ಯತೆ ಇದೆ.
ನಿಮ್ಮ ಪ್ರತಿಕ್ರಿಯೆ ಏನು?






