Darshan: “ದಾಸ”ನಿಗೆ ಜೈಲು ಮುಕ್ತಿ: ಕೊನೆಗೂ ದರ್ಶನ್ʼಗೆ ಜಾಮೀನು ಮಂಜೂರು

ಡಿಸೆಂಬರ್ 13, 2024 - 14:59
 0  12
Darshan: “ದಾಸ”ನಿಗೆ ಜೈಲು ಮುಕ್ತಿ: ಕೊನೆಗೂ ದರ್ಶನ್ʼಗೆ ಜಾಮೀನು ಮಂಜೂರು

 

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ಎ2 ಆಗಿರುವ ನಟ ದರ್ಶನ್​ ಅವರಿಗೆ ಈಗ ರಿಲೀಫ್ ಸಿಕ್ಕಿದೆ. ಹೌದು ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್​ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದ್ದು, 

ಜೂನ್​ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿತ್ತು. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಅವರಿಗೆ ಬಿಗ್ ರಿಲೀಫ್ ಕೊಟ್ಟಿದೆ. ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್, ಅನುಕುಮಾರ್, ಜಗದೀಶ್, ಪ್ರದೂಷ್ ಜಾಮೀನು ಕೋರಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದ ಎಲ್ಲರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow