Death: ಒಂದೇ ಮರದ ಕೊಂಬೆಗೆ ನೇಣಿಗೆ ಶರಣಾದ ಪ್ರೇಮಿಗಳು: ಕಾರಣ?

ಎಪ್ರಿಲ್ 22, 2025 - 22:00
 0  18
Death: ಒಂದೇ ಮರದ ಕೊಂಬೆಗೆ ನೇಣಿಗೆ ಶರಣಾದ ಪ್ರೇಮಿಗಳು: ಕಾರಣ?

ವಿಜಯನಗರ:- ಒಂದೇ ಮರದ ಕೊಂಬೆಗೆ ಪ್ರೇಮಿಗಳು ನೇಣಿಗೆ ಶರಣಾಗಿರುವ ಘಟನೆ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ  ಜರುಗಿದೆ. 

ಘಟನಾ ಸ್ಥಳಕ್ಕೆ ಹರಪನಹಳ್ಳಿ ಪೊಲೀಸರು ಭೇಟಿ ನೀಡಿ, ಪರಶೀಲನೆ ನಡೆಸಿದರು. ಪ್ರೇಮಿಗಳಿಬ್ಬರು ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ನೇಣಿಗೆ ಶರಣಾದ ಪ್ರೇಮಿಗಳು. ಒಂದೇ ಮರದ ಕೊಂಬೆಗೆ ಇಬ್ಬರೂ ನೇಣುಬಿಗಿದುಕೊಂಡಿದ್ದಾರೆ

ಮದ್ದನಸ್ವಾಮಿ ಹಾಗೂ ದೀಪಿಕಾ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಇವರಿಬ್ಬರು ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದರು. ಇದೀಗ ದಿಢೀರ್ ಆತ್ಮಹತ್ಯೆಗೆ ಶರಣಾಗಿರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow