Director Prem: ದರ್ಶನ್ ಬಗ್ಗೆ KD ಇವೆಂಟ್ʼನಲ್ಲಿ ನಿರ್ದೇಶಕ ಪ್ರೇಮ್ ರಿಯಾಕ್ಷನ್ ಏನೂ ಗೊತ್ತಾ..?

ಡಿಸೆಂಬರ್ 24, 2024 - 18:01
 0  15
Director Prem: ದರ್ಶನ್ ಬಗ್ಗೆ KD ಇವೆಂಟ್ʼನಲ್ಲಿ ನಿರ್ದೇಶಕ ಪ್ರೇಮ್ ರಿಯಾಕ್ಷನ್ ಏನೂ ಗೊತ್ತಾ..?

ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ದರ್ಶನ್ ಸೇರಿ ಕೆಲವರು ಜೈಲಿನಿಂದ ರಿಲೀಸ್ ಆಗಿದ್ದಾರೆ. 7 ಮಂದಿ ಆರೋಪಿಗಳಿಗೆ ಸೆರೆವಾಸದಿಂದ ಮುಕ್ತಿ ಸಿಕ್ಕಿದೆ. ಇದರ ಮಧ್ಯೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ದಾಸ ಮೈಸೂರಿನಲ್ಲಿ ರಿಲ್ಯಾಕ್ಸ್ ಮೋಡ್‌ಗೆ ಜಾರಿದ್ದಾರೆ. ಇನ್ನೂ ದರ್ಶನ್ ಬಂಧನವಾದಾಗ ಅವರು ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿದ್ದರು. ನಿರ್ದೇಶಕ ಪ್ರೇಮ್ ಜೊತೆ ಮತ್ತೊಂದು ಸಿನಿಮಾ ಮಾಡಲಿದ್ದರು. ಈ ಸಿನಿಮಾಗಳು ನಿಂತು ಹೋಗಿವೆ ಎಂಬ ಸುದ್ದಿಯೂ ಹರಿದಾಡುತ್ತಿತ್ತು, ಇದೀಗ ಈ ಬಗ್ಗೆ ನಟ ಪ್ರೇಮ್ ಸ್ಪಷ್ಟನೆ ನೀಡಿದ್ದಾರೆ.

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿರುವ ಪ್ರೇಮ್, ‘ನಾನು ಹಾಗೂ ದರ್ಶನ್ ಅಣ್ಣ-ತಮ್ಮಂದಿರು. ನಾವು ಒಂದೇ ಕುಟುಂಬದವರು. ನಾನು ಮೊದಲ ಬಾರಿಗೆ ದರ್ಶನ್​ಗಾಗಿ ‘ಕರಿಯ’ ಸಿನಿಮಾ ಮಾಡಿದಾಗ ಆಗ ನಾವು ಪರಿಚಯದವರು ಅಷ್ಟೆ ಆದರೆ ಪತ್ನಿ ರಕ್ಷಿತಾ ಅವರಿಗೆ ಅದಾಗಲೇ ಅವರು ಬಹಳ ಆತ್ಮೀಯ ಗೆಳೆಯರು. ಒಬ್ಬರ ಕಷ್ಟಕ್ಕೆ ಇನ್ನೊಬ್ಬರು ಆಗುವ ಗೆಳೆಯರು. ನನಗೂ ಸಹ ದರ್ಶನ್ ಅವರು ಬಹಳ ಆಪ್ತರು’ ಎಂದಿದ್ದಾರೆ ಪ್ರೇಮ್.

‘ದರ್ಶನ್ ಹಾಗೂ ನಾನು ಒಟ್ಟಿಗೆ ಸಿನಿಮಾ ಮಾಡಬೇಕು ಎಂದು ಅಭಿಮಾನಿಗಳು ಹಲವು ವರ್ಷದಿಂದ ಕೇಳುತ್ತಲೇ ಇದ್ದರು. ಹಾಗಾಗಿ ನಾನು ಖಂಡಿತ ದರ್ಶನ್​ಗೆ ಸಿನಿಮಾ ಮಾಡುತ್ತೀನಿ. ಅದರಲ್ಲಿ ಅನುಮಾನವೇ ಬೇಡ. ಎಲ್ಲರೂ ಒಂದೇ ಕುಟುಂಬದ ರೀತಿ. ದರ್ಶನ್ ಅವರು ಆರೋಗ್ಯವಾಗಿದ್ದಿದ್ದರೆ ನಾನೇ ಅವರನ್ನು ಕರೀತಿದ್ದೆ. ಈ ಸಿನಿಮಾದ ಹಾಡನ್ನು ಅವರಿಂದಲೇ ಬಿಡುಗಡೆ ಮಾಡಿಸುತ್ತಿದ್ದೆ. ಆದರೆ ಅವರಿಗೆ ಬೆನ್ನು ನೋವು ಇರುವ ಕಾರಣ ಈಗ ಬೇಡ ಎಂದುಕೊಂಡೆ. ಮುಂದಿನ ದಿನಗಳಲ್ಲಿ ಅವರನ್ನು ಕರೆಯುತ್ತೀನಿ. ನನಗಾಗಲಿ, ರಕ್ಷಿತಾ, ಧ್ರುವ ಅವರಿಗಾಗಲಿ ಎಲ್ಲರಿಗೂ ಬೆಂಬಲ ಕೊಡುತ್ತಾರೆ’ ಎಂದಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow