Former MLA S Jayanna: ಅಗಲಿದ ಆಪ್ತ ಗೆಳೆಯನಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ.!

ಚಾಮರಾಜನಗರ: ಹೃದಯಾಘಾತಕ್ಕೊಳಗಾಗಿ ನಿಧನರಾದ ಕೊಳ್ಳೇಗಾಲದ ಮಾಜಿ ಶಾಸಕ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಅವರ ಅಂತಿಮ ದರ್ಶನಕ್ಕಾಗಿ ಕೊಳ್ಳೇಗಾಲದ ಮಹದೇಶ್ವರ ಬಡಾವಣೆಯಲ್ಲಿರುವ ಎಸ್ ಜಯಣ್ಣ ನಿವಾಸಕ್ಕೆ ಸಚಿವರಾದ ವೆಂಕಟೇಶ್, ಮಹದೇವಪ್ಪ ಅವರ ಜೊತೆ ಆಗಮಿಸಿ ಅಂತಿಮ ದರ್ಶನ ಪಡೆದರು.
ಕೊಳ್ಳೇಗಾಲಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಿದ್ದರಾಮಯ್ಯ ಅವರು, ಜಯಣ್ಣ ನಿವಾಸಕ್ಕೆ ತೆರಳಿ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಚ ಇರಿಸಿ ಅಂತಿಮ ಗೌರವ ಸಲ್ಲಿಸಿದ್ರು. ಇದೇ ವೇಳೆ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಮೃತ ಜಯಣ್ಣ ಅವರಿಗೆ ಜಿಲ್ಲಾಡಳಿತದಿಂದ ಸರ್ಕಾರಿ ಗೌರವ ಸಲ್ಲಿಸಲಾಯ್ತು. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್ ಜಯಣ್ಣ ಅವರು ಮಂಗಳವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು.
1994 ರಲ್ಲಿ ಜನತಾದಳ ಹಾಗು 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಕೊಳ್ಳೇಗಾಲ ಶಾಸಕರಾಗಿ ಆಯ್ಕೆಯಾಗಿದ್ದ ಎಸ್ ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಜಯಣ್ಣ ಅವರನ್ನು ಇದೇ ವರ್ಷ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
ನಿಮ್ಮ ಪ್ರತಿಕ್ರಿಯೆ ಏನು?






