Gold Suresh: ಗೋಲ್ಡ್ ಸುರೇಶ್ ವಿರುದ್ಧ ವಂಚನೆ ಆರೋಪ: ಲಕ್ಷ ಲಕ್ಷ ಪಂಗನಾಮ ಹಾಕಿದ್ರಾ Bigboss ಸ್ಫರ್ಧಿ?

ಗೋಲ್ಡ್ ಸುರೇಶ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮೈನುದ್ದಿನ್ ಎಂಬುವವರು ಆರೋಪ ಮಾಡಿದ್ದು, ಸುರೇಶ್ ಅವರು ಕೇಬಲ್ ಚಾನೆಲ್ನ ಸೆಟಅಪ್ ಮಾಡುವುದಾಗಿ ಹೇಳಿದ್ದರು.
ಬರೋಬ್ಬರಿ 14 ಲಕ್ಷಕ್ಕೆ ಒಪ್ಪಂದ ಆಗಿತ್ತು. ಅಲ್ಲದೆ ಸುರೇಶ್ ನಾಲ್ಕು ಲಕ್ಷ ರೂಪಾಯಿ ಮುಂಗಡ ಪಡೆದಿದ್ದರು. ಆ ಬಳಿಕ ಹಂತ ಹಂತವಾಗಿ ಏಳು ಲಕ್ಷ ರೂಪಾಯಿನ ಸುರೇಶ್ಗೆ ಮೈನುದ್ದೀನ್ ನೀಡಿದ್ದರು. 2017ರಲ್ಲಿ ಇಬ್ಬರ ಮಧ್ಯೆ ಒಪ್ಪಂದ ನಡೆದಿತ್ತು. ಆದರೆ, ಆ ಬಳಿಕ ಅರೆಬರೆ ಕೆಲಸ ಮಾಡಿ ಸುರೇಶ್ ಅರ್ಧಕ್ಕೆ ಬಿಟ್ಟರು. ಈಗ ಅವರು ಹಣವನ್ನು ಮರಳಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ
ಬಿಗ್ಬಾಸ್ ಬಳಿಕ ಸುರೇಶ್ನನ್ನ ಮೈನುದ್ದಿನ್ ಪತ್ತೆ ಹಚ್ಚಿದ್ದ, ಅದಾದಮೇಲೆ ಮೈನುದ್ದೀನ್ ಸ್ನೇಹಿತ ಬಸವರಾಜ್ಗೆ ಸುರೇಶ್ 50 ಸಾವಿರ ರೂ. ಹಣ ಹಾಕಿದ್ದ. ಆಗಾಗ್ಗೆ ಅಲ್ಪಸ್ವಲ್ಪ ಹಣ ಕೊಟ್ಟಿದ್ದಾರೆ, ಉಳಿದ 4 ಲಕ್ಷ ಹಣ ಕೊಡಿ ಅಂತ ಕೇಳ್ತಿದ್ದೀವಿ. ಕೆಲ ದಿನಗಳ ಹಿಂದೆಯೂ ಮುಂಬೈಗೆ ಬನ್ನಿ ಕೊಡ್ತಿನಿ ಅಂತ ಗೋಲ್ಡ್ ಸುರೇಶ್ ಮುಂಬೈ ಲೊಕೇಶನ್ ಹಾಕಿದ್ದರು ಎಂದು ದೂರಿದ್ದಾರೆ.
ಇನ್ನೂ ಮೈನುದ್ದೀನ್ ಆರೋಪ ತಳ್ಳಿಹಾಕಿರುವ ಗೋಲ್ಡ್ ಸುರೇಶ್, 2017ರಲ್ಲೇ ಕೇಬಲ್ ಚಾನಲ್ ಮಾಡಿಕೊಟ್ಟಿದ್ದೀನಿ, ಈಗ ಯಾಕೆ ಆರೋಪ ಮಾಡ್ತಿದಾರೆ ಗೊತ್ತಿಲ್ಲ? ಅವರು ಕೇಬಲ್ ಚಾನೆಲ್ರನ್ನ ಮಾಡುತ್ತಿದ್ದಾರೆ. ಅವರು ನಮ್ಮ ಜೊತೆ ವ್ಯವಹಾರ ಸರಿಯಾಗಿ ಮಾಡದ ಹಿನ್ನೆಲೆ ಅವರಿಗೆ ಬಾಕಿ ಹಣ ಮರಳಿಸಿದ್ದೇನೆ. 2017ರ ಬಳಿಕ ನಾನು ಮೈನುದ್ದಿನ್ನ ಭೇಟಿಯಾಗಿಲ್ಲ. ಬಿಗ್ಬಾಸ್ ಮುಗಿದು ಎಷ್ಟು ದಿನ ಆಯ್ತು? ಈಗ ನನ್ನ ಮೇಲೆ ಆರೋಪ ಮಾಡ್ತಿದ್ದಾನೆ ಎಂದು ಪ್ರಶ್ನೆ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






