Gruhalakshmi Scheme: ಗೃಹಲಕ್ಷ್ಮಿ ಹಣದಲ್ಲಿ ಮಗಳಿಗೆ ಕಂಪ್ಯೂಟರ್ ಕೊಡಿಸಿದ ತಾಯಿ!

ತುಮಕೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಈ ಯೋಜನೆಯ ಹಣ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ.
ಅದರಂತೆ ಇದೀಗ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ತುಮಕೂರು ಜಿಲ್ಲೆ ತಿಪಟೂರು ಗಾಂಧಿ ನಗರದ ಕೆರಗೋಡಿಯಲ್ಲಿ ತಾಯಿಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮಗಳಿಗೆ ಕಂಪ್ಯೂಟರ್ ಕೊಡಿಸಿದ್ದಾರೆ.
ನಗರದ ಕೆರಗೋಡಿ ವಾಸಿಗಳಾದ ಸಾಧಿಕ್ ಹಾಗೂ ನಗ್ಮ ದಂಪತಿ ತಮ್ಮ ಪುತ್ರಿ ಸೈದಾ ಆಫೀಫಾಗೆ ಓದಲು ಅನುಕೂಲ ಆಗಲೆಂದು ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಕಂಪ್ಯೂಟರ್ ಕೊಡಿಸಿದ್ದಾರೆ. ಗೃಹಲಕ್ಷ್ಮಿ ಹಣದ ಜೊತೆಗೆ ಸ್ಕಾಲರ್ ಶಿಪ್ ಹಣ ಕೂಡ ಸೇರಿಸಿ ಕಂಪ್ಯೂಟರ್ ಖರೀದಿ ಮಾಡಿದ್ದಾರೆ. ಪೋಷಕರ ಗೃಹಲಕ್ಷ್ಮಿ ಹಣದ ಸದ್ಭಳಕೆ ಇತರೆ ಪೋಷಕರಿಗೆ ಪ್ರೇರಣೆಯಾಗಿದೆ. ಇನ್ನು ಕಳೆದ 2023 ಜುಲೈ 19ರಿಂದ ಬಹುನಿರೀಕ್ಷಿತ ಗೃಹ ಲಕ್ಷ್ಮೀ ಯೋಜನೆ ಆರಂಭವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಉದ್ಘಾಟನೆ ಮಾಡುವ ಮೂಲಕ ಚಾಲನೆ ನೀಡಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






