H D Kumaraswamy; ಸಾಯಿ ಮಿನರಲ್ಸ್‌ ಕೇಸಲ್ಲಿ ನನ್ನ ಸಹಿ ಫೋರ್ಜರಿ.

ಆಗಸ್ಟ್ 22, 2024 - 11:51
 0  15
H D Kumaraswamy; ಸಾಯಿ ಮಿನರಲ್ಸ್‌ ಕೇಸಲ್ಲಿ ನನ್ನ ಸಹಿ ಫೋರ್ಜರಿ.
Focus Karnataka HD Kumaraswamy

ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಸೂಜಿ ಮೊನೆಯಷ್ಟು ಜಾಗವನ್ನೂ ನೀಡಿಲ್ಲ ಮತ್ತು ಅವರು ಗಣಿಗಾರಿಕೆಯನ್ನೂ ಮಾಡಿಲ್ಲ. ರಾಜ್ಯದ ಬೊಕ್ಕಸಕ್ಕೆ ನಯಾಪೈಸೆ ನಷ್ಟವೂ ಆಗಿಲ್ಲ. ವಿಷಯ ಹೀಗಿರುವಾಗ ಎಸ್ಐಟಿ ರಾಜ್ಯಪಾಲರಿಂದ ಅಭಿಯೋಜನೆಗೆ ಹೇಗೆ ಅನುಮತಿ ಕೋರುತ್ತದೆ? ಎಂದು ಕಿಡಿಕಾರಿದ ಕೇಂದ್ರದ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ..

ರಾಜ್ಯ ಕಾಂಗ್ರೆಸ್‌ ಸರ್ಕಾರ ನನ್ನ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿದೆ. ನನ್ನ ಸಹಿ ಇಲ್ಲದ, ಫೋರ್ಜರಿ ಸಹಿಯ ಪ್ರಕರಣವನ್ನಿಟ್ಟುಕೊಂಡು ನನ್ನ ಮೇಲೆ ಪ್ರಯೋಗ ಮಾಡುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.


 ಬುಧವಾರ ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧ ರಾಜ್ಯಪಾಲರಿಗೆ ಅಭಿಯೋಜನೆಗಾಗಿ ಎಸ್‌ಐಟಿ ಸಲ್ಲಿಸಿರುವ ಮನವಿ ಮತ್ತು ಕಾಂಗ್ರೆಸ್‌ ಮಾಡಿರುವ ಆರೋಪಗಳಿಗೆ ತಿರುಗೇಟು ನೀಡಿದರು. ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಸೂಜಿ ಮೊನೆಯಷ್ಟು ಜಾಗವನ್ನೂ ನೀಡಿಲ್ಲ ಮತ್ತು ಅವರು ಗಣಿಗಾರಿಕೆಯನ್ನೂ ಮಾಡಿಲ್ಲ. ರಾಜ್ಯದ ಬೊಕ್ಕಸಕ್ಕೆ ನಯಾಪೈಸೆ ನಷ್ಟವೂ ಆಗಿಲ್ಲ. ವಿಷಯ ಹೀಗಿರುವಾಗ ಎಸ್ಐಟಿ ರಾಜ್ಯಪಾಲರಿಂದ ಅಭಿಯೋಜನೆಗೆ ಹೇಗೆ ಅನುಮತಿ ಕೋರುತ್ತದೆ? ಎಂದು ಕಿಡಿಕಾರಿದರು..

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow