HD ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಸೇಡಿನ ರಾಜಕಾರಣ ನಡೆಸುತ್ತಿದೆ: ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: HD ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಸೇಡಿನ ರಾಜಕಾರಣ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ವಿರುದ್ದ ಮತ್ತೊಮ್ಮೆ ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಿರೋ ವಿಚಾರ ಸೇಡಿನಿಂದ ಕೂಡಿದೆ. ಇದು ದ್ವೇಷದ ರಾಜಕಾರಣ. ರಾಜ್ಯದಲ್ಲಿ ಮೊದಲಿನಿಂದಲೂ ದ್ವೇಷದ ರಾಜಕಾರಣ ನಡೀತಿದೆ ಎಂದು ಆರೋಪಿಸಿದರು.
ಫ್ಲೈ ಓವರ್ ಕಾಮಗಾರಿ ಅಸಮರ್ಪಕ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿ ಫ್ಲೈ ಓವರ್ ಕೇಂದ್ರ ಸರ್ಕಾರದ ಕಾಮಗಾರಿಯಲ್ಲ. ಇದರ ಅನುಷ್ಠಾನದ ಜವಾಬ್ದಾರಿ ರಾಜ್ಯ ಸರ್ಕಾರದ್ದು, ರಾಜ್ಯ ಸರ್ಕಾರದ ಸಚಿವರು ಇದರ ಬಗ್ಗೆ ಹೆಚ್ಚು ಗಮನ ಕೊಡಲಿ ಎಂದು ಸಚಿವ ಜೋಶಿ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಪೊಲೀಸ್ ಇಲಾಖೆಯಿಂದ ಕಂದಾಯ ಇಲಾಖೆವರೆಗೂ ಭ್ರಷ್ಟಾಚಾರ ವ್ಯಾಪಿಸಿದೆ. ಆರ್ಟಿಒ ವರ್ಗಾವಣೆಯಲ್ಲಿಯೂ ವ್ಯಾಪಕ ಭ್ರಷ್ಟಾಚಾರವಾಗಿದೆ. ಭ್ರಷ್ಟಾಚಾರದಿಂದ ಇವರ ಬಳಿ ಹಣವಿಲ್ಲ. ಆಡಳಿತ ನಡೆಸಲೂ ಆಗ್ತಿಲ್ಲ. ಮುಂದಾಲೋಚನೆ ಇಲ್ಲದೆ ಗ್ಯಾರಂಟಿ ಅನುಷ್ಠಾನಕ್ಕೆ ತಂದಿದೆ. ದೊಡ್ಡ ಪ್ರಮಾಣದ ವಿದ್ಯುತ್ ಕಡಿತವಾಗಿದೆ. ಗ್ಯಾರಂಟಿ ಯಾರಿಗೂ ಸಿಗದಂತೆ ಮಾಡ್ತಿದೆ ಎಂದು ಆರೋಪಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






