Honeytrap: ನನ್ನ ಕುಟುಂಬಕ್ಕೂ ಹನಿಟ್ರ್ಯಾಪ್ ಆಗಿದೆ: ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ - ತನಿಖೆಗೆ ಆದೇಶ

ಮಾರ್ಚ್ 20, 2025 - 17:59
 0  16
Honeytrap: ನನ್ನ ಕುಟುಂಬಕ್ಕೂ ಹನಿಟ್ರ್ಯಾಪ್ ಆಗಿದೆ: ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ - ತನಿಖೆಗೆ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯದ ರಾಜಕೀಯದಲ್ಲಿ ಮತ್ತೊಮ್ಮೆ, ಹನಿಟ್ರ್ಯಾಪ್ ಎಂಬ ಭೂತ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಯಾಕಂದ್ರೆ ಹಿಂದಿನ ಹನಿಟ್ರ್ಯಾಪ್ ಪ್ರಕರಣಗಳು ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟಗೆ ಸದ್ದು ಮತ್ತು ಸುದ್ದಿ ಮಾಡಿದ್ದವು. ಇದೀಗ ಅದೇ ರೀತಿಯ ಮತ್ತೊಂದು ಹನಿಟ್ರ್ಯಾಪ್, ರಾಜಕೀಯ ಪಡಸಾಲೆಯಲ್ಲಿ ಗುಲ್ಲೇಬಿಸಿದೆ.

ಹನಿಟ್ರ್ಯಾಪ್ ಬಲೆಯಲ್ಲಿ ಪ್ರಭಾವಿ ಸಚಿವರನ್ನೇ ಸಿಲುಕಿಸಲು ಮಹಾ ಯತ್ನ ನಡೆದಿದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಇದೀಗ ಜ್ಯದ 48 ರಾಜಕೀಯ ಮುಖಂಡರ ಸಿ.ಡಿ, ಪೆನ್‌ಡ್ರೈವ್‌ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಸ್ಫೋಟಕ ಮಾಹಿತಿ ನೀಡಿದರು.

ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತನಾಳ್ ಅವರು, ರಾಜ್ಯದಲ್ಲಿ ನಮ್ಮ ಸಹಕಾರ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿದೆ. ಇವತ್ತು ರಾಜಣ್ಣ ಮೇಲೆ ಆಗಿದೆ. ನಾಳೆ ಮತ್ತೊಬ್ಬರ ಮೇಲೆ ಆಗಬಹುದು ಎಂದು ಹೇಳಿದರು. ಇದರ ಬೆನ್ನಲ್ಲಿಯೇ ಸಚಿವ ಕೆ.ಎನ್. ರಾಜಣ್ಣ ಅವರು ಮಾತನಾಡಿ, ಕರ್ನಾಟಕ ರಾಜ್ಯ ಅಂದ್ರೆ ಸಿಡಿ, ಪೆನ್ ಡ್ರೈವ್ ಅನ್ನೋ ತರ ಆಗಿದೆ.

ಎರಡು ಫ್ಯಾಕ್ಟರಿ ಇದ್ಯಾ..? ನಿಮ್ಮದು ಯಾವುದು ಅಂತ ಹೇಳಿದ್ರೆ ನಮ್ಮದು ಯಾವುದು ಅಂತ ಹೇಳ್ತಿನಿ. ಈ ವಿಚಾರದಲ್ಲಿ 48 ಜನ ಇದಾರೆ. ಇದು ರಾಷ್ಟ್ರ ಮಟ್ಟದ ನಾಯಕರ ಪೆನ್ ಡ್ರೈವ್ ಕೂಡ ಇದಾವೆ. ನಾನು ನಮ್ಮ ಗೃಹಮಂತ್ರಿಗಳಿಗೆ ಕಂಪ್ಲೇಂಟ್ ಕೊಡ್ತಿನಿ. ಕಂಪ್ಲೇಂಟ್ ಆಧಾರದ ಮೇಲೆ ತನಿಖೆ ಮಾಡಿಸಲಿ. ನನ್ನ ಮೇಲೆ ಅಟೆಂಪ್ಟ್ ಆಗಿರೋದಕ್ಕೆ ಪುರಾವೆ ಇಟ್ಕೊಂಡಿದ್ದೇನೆ ಎಂದು ಹೇಳಿದರು.

ಮುಂದುವರೆದು, ಇದು ರಾಜ್ಯ ಮಟ್ಟಕ್ಕೆ ಮಾತ್ರ ಸೀಮಿತವಾಗಿಲ್ಲ, ರಾಷ್ಟ್ರ ಮಟ್ಟದ ಎಲ್ಲ ಪಕ್ಷದ ನಾಯಕರ ಹನಿಟ್ರ್ಯಾಪ್‌ಗಳ ಪೆನ್‌ಡ್ರೈವ್‌ಗಳು ಕೂಡ ಇವೆ. ಗೃಹ ಮಂತ್ರಿಗಳು ಈ ಬಗ್ಗೆ ತನಿಖೆ ಮಾಡಿಸಬೇಕು. ಈ ಬಗ್ಗೆ ತನಿಖೆ ಮಾಡಿಸಿ ಪ್ರೊಡ್ಯೂಸರ್, ಡೈರೆಕ್ಟರ್, ನಟಿಯರು ಯಾರಾರಿದ್ದಾರೆ ಎಂಬುದನ್ನು ಬಯಲಿಗೆಳೆಯಬೇಕು. ಈ ಬಗ್ಗೆ ನಾನು ದೂರು ನೀಡುತ್ತೇನೆ, ಒಂದು ವಿಶೇಷ ತನಿಖೆಯನ್ನು ಮಾಡಿಸಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಪರಮೇಶ್ವರ್ ಅವರು, ಇದು ಈ ಸದನದ ಸದಸ್ಯನ ಪ್ರಶ್ನೆ. ಇದಕ್ಕೆಲ್ಲಾ ಒಂದು ಕಡಿವಾಣ ಹಾಕಬೇಕು. ಕರ್ನಾಟಕ ವಿಧಾನಸಭೆ ಅತ್ಯಂತ ಗೌರವ ಹೊಂದಿದೆ. ದೊಡ್ಡ ದೊಡ್ಡ ಸದಸ್ಯರ ಆದರ್ಶಗಳನ್ಮ ಬಿಟ್ಟು ಹೋಗಿದ್ದಾರೆ. ಸದನದ ಸದಸ್ಯರ ಮರ್ಯಾದೆ ಕಾಪಾಡಬೇಕಾದರೆ ಇದಕ್ಕೆ ಇತಿಶ್ರೀ ಹಾಕಬೇಕು. ರಾಜಣ್ಣ ಅವರು ಏನು ಪ್ರಸ್ತಾಪ ಮಾಡಿದ್ದಾರೆ. ಅವರು ಮನವಿ ಕೊಡ್ತೇನೆ ಎಂದು ಹೇಳಿದ್ದಾರೆ. ಅವರ ಮನವಿ ಆಧಾರದ ಮೇಲೆ ಉನ್ನತ ಮಟ್ಟದ ತನಿಖೆ ಮಾಡಿಸ್ತೇನೆ ಎಂದ ಸಚಿವ ಪರಮೇಶ್ವರ್ ಹೇಳಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow