Hubballi: 5 ವರ್ಷದ ಬಾಲಕಿ ಹತ್ಯೆ ಕೇಸ್: ಮೃತಳ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ಘೋಷಣೆ

ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದ ಆರೋಪಿಯನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಾಗ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾನೆ. ಇನ್ನೂ ಮೃತ ಬಾಲಕಿಯ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಸಿಎಂ ನಿರ್ದೇಶನದ ಮೇರೆಗೆ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಘೋಷಣೆ ಮಾಡಲು ಸಿಎಂ ಅವರು ಹೇಳಿದ್ದಾರೆ. ಜೊತೆಗೆ ಸ್ಲಂ ಬೋರ್ಡ್ನಿಂದ ಬಾಲಕಿಯ ಕುಟುಂಬಕ್ಕೆ ಒಂದು ಮನೆ ಹಸ್ತಾಂತರಕ್ಕೆ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಘೋಷಣೆ ಮಾಡಿದರು.
ನಿಮ್ಮ ಪ್ರತಿಕ್ರಿಯೆ ಏನು?






