IPL 2025: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ RCB! ತಂಡದಲ್ಲಿ ಭಾರೀ ಬದಲಾವಣೆ

ಎಪ್ರಿಲ್ 13, 2025 - 15:27
 0  12
IPL 2025: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ RCB! ತಂಡದಲ್ಲಿ ಭಾರೀ ಬದಲಾವಣೆ

ಈ ಬಾರಿ ಕೋಲ್ಕತಾ, ಚೆನ್ನೈ, ಮುಂಬೈ ಭದ್ರಕೋಟೆಗಳನ್ನು ಭೇದಿಸಿ ಗೆದ್ದಿರುವ ಆರ್‌ಸಿಬಿ, ತವರಿನಾಚೆ ತನ್ನ ಗೆಲುವಿನ ನಾಗಾಲೋಟ ಮುಂದುವರಿಸುವ ನಿರೀಕ್ಷೆಯಲ್ಲಿದೆ. ತವರಿನ ಅಂಗಳದಲ್ಲಿ ಎರಡೆರಡು ಸೋಲು ಕಂಡರೂ, ಇಂದು ಜೈಪುರದಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ಜಯಭೇರಿ ಬಾರಿಸಲು ಆರ್‌ಸಿಬಿ ಕಾತರಿಸುತ್ತಿದೆ.

ದಿನದ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದು ರಾಜಸ್ಥಾನ್ ರಾಯಲ್ಸ್ ತಂಡದ ತವರು ಮೈದಾನ. ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿವೆ.

ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ (RR) ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಹಸಿರು ಜೆರ್ಸಿಯನ್ನು ಧರಿಸಲಿದೆ. ಮರಗಳನ್ನು ನೆಡುವುದು ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳನ್ನು ಕಡಿಮೆ ಮಾಡುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 2011 ರಲ್ಲಿ ಪ್ರಾರಂಭಿಸಲಾದ ‘ಗೋ ಗ್ರೀನ್’ ಉಪಕ್ರಮದ ಭಾಗವಾಗಿ,

 RCB ಪ್ರತಿ ಋತುವಿನ ಒಂದು ಪಂದ್ಯಕ್ಕೆ 100% ಮರುಬಳಕೆಯ ವಸ್ತುಗಳಿಂದ ಮಾಡಿದ ಹಸಿರು ಜೆರ್ಸಿಗಳನ್ನು ಧರಿಸುತ್ತದೆ. ಈ ಸಂದರ್ಭದಲ್ಲಿ, ಟಾಸ್ ಸಮಯದಲ್ಲಿ ಎದುರಾಳಿ ನಾಯಕನಿಗೆ ಸಸಿಯನ್ನು ಉಡುಗೊರೆಯಾಗಿ ನೀಡುವುದು ಸಹ ಈ ಪರಿಸರ ಅಭಿಯಾನದ ಒಂದು ಭಾಗವಾಗಿರುತ್ತದೆ.

ಕಳೆದ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರು ವಿಕೆಟ್‌ಗಳಿಂದ ಸೋತಿತ್ತು. ಇತ್ತ ರಾಜಸ್ಥಾನ ತಂಡವನ್ನು ಗುಜರಾತ್ ಟೈಟಾನ್ಸ್ 58 ರನ್‌ಗಳಿಂದ ಸೋಲಿಸಿತು. ಮತ್ತೊಂದೆಡೆ, ರಾಜಸ್ಥಾನ್ ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದರೆ, ಆರ್‌ಸಿಬಿ 5 ನೇ ಸ್ಥಾನದಲ್ಲಿದೆ. ಟಾಸ್ ಗೆದ್ದ ಆರ್​​ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ಮೊದಲು ಬ್ಯಾಟಿಂಗ್ ಮಾಡಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11

ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ಯಶ್ ದಯಾಲ್.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11

ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್/ನಾಯಕ), ನಿತೀಶ್ ರಾಣಾ, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow