IPL 2025: ನಾನು ನನ್ನ ತಪ್ಪನ್ನು ಒಪ್ಪಿಕೊಳ್ಳುತ್ತೇನೆ: RCB ವಿರುದ್ಧ ಸೋತ ನಂತರ ಧೋನಿ ಹೇಳಿದ್ದೇನು..?

ತವರಿನಲ್ಲಿ ನಡೆದಂತಹ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ ಎರಡೇ 2 ರನ್ಗಳಿಂದ ರೋಚಕ ಗೆಲುವು ಪಡೆದಿದೆ. ಕೊನೆ ಬಾಲ್ ಯಾರ್ಕರ್ ಹಾಕಿದ್ದೇ ತಡ ಇಡೀ ಸ್ಟೇಡಿಯಂ ಎಲ್ಲ ಸಂಭ್ರಮದಲ್ಲಿ ಮುಳುಗಿತ್ತು. ಇಂತಹ ರಣರೋಚಕ ಪಂದ್ಯ ಮುಗಿದ ನಂತರ ಮಾತನಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ,
‘‘ನಾವು ಇನ್ನೂ ಕೆಲವು ದೊಡ್ಡ ಹೊಡೆತಗಳನ್ನು ಆಡುವ ಮೂಲಕ ಒತ್ತಡವನ್ನು ಕಡಿಮೆ ಮಾಡಬೇಕಾಗಿತ್ತು ಎಂದು ನಾನು ಭಾವಿಸುತ್ತೇನೆ. ಇದಕ್ಕಾಗಿ ನಾನು ನನ್ನ ತಪ್ಪನ್ನು ಸಹ ಒಪ್ಪಿಕೊಳ್ಳುತ್ತೇನೆ. ಶೆಫರ್ಡ್ ಡೆತ್ ಓವರ್ಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ಹಲವು ರನ್ ಗಳಿಸಿದರು’’ ಎಂದು ಹೇಳಿದ್ದಾರೆ.
ಆರ್ಸಿಬಿ ಪರ ರೊಮಾರಿಯೊ ಶೆಫರ್ಡ್ 14 ಎಸೆತಗಳಲ್ಲಿ ಅಜೇಯ 53 ರನ್ ಸಿಡಿಸಿದರು, ಇದು ಐಪಿಎಲ್ನಲ್ಲಿ ಜಂಟಿಯಾಗಿ ಎರಡನೇ ವೇಗದ ಅರ್ಧಶತಕವಾಗಿದೆ. ಕೊನೆಯ ಎರಡು ಓವರ್ಗಳಲ್ಲಿ ಚೆನ್ನೈ ಬೌಲರ್ಗಳು ಬರೋಬ್ಬರಿ 54 ರನ್ಗಳನ್ನು ನೀಡಿದರು. ತಮ್ಮ ಬೌಲಿಂಗ್ ಬಗ್ಗೆ ಮಾತನಾಡಿದ ಧೋನಿ, ‘‘ನಾವು ಹೆಚ್ಚು ಯಾರ್ಕರ್ಗಳನ್ನು ಬೌಲಿಂಗ್ ಮಾಡುವುದನ್ನು ಅಭ್ಯಾಸ ಮಾಡಬೇಕು’’ ಎಂದು ಹೇಳಿದರು.
ಬ್ಯಾಟ್ಸ್ಮನ್ ಕ್ರೀಸ್ನಲ್ಲಿ ಸೆಟ್ ಆದಾಗ ಯಾರ್ಕರ್ಗಳು ಮಾತ್ರ ಉಪಯುಕ್ತ ಆಗುತ್ತದೆ. ನೀವು ಯಾರ್ಕರ್ ಎಸೆಯಲು ಸಾಧ್ಯವಾಗದಿದ್ದರೆ, ಕಡಿಮೆ ಫುಲ್-ಟಾಸ್ ಅತ್ಯುತ್ತಮ ಆಯ್ಕೆಯಾಗಿದೆ. ಪತಿರಣ ವೇಗಿಯಾಗಿದ್ದು, ಬೌನ್ಸರ್ಗಳನ್ನು ಸಹ ಎಸೆಯಬಲ್ಲರು. ಅವನು ಯಾರ್ಕರ್ ಎಸೆಯಲು ತಪ್ಪಿದರೆ, ಬ್ಯಾಟ್ಸ್ಮನ್ ದೊಡ್ಡ ಹೊಡೆತವನ್ನು ಆಡುವ ಸಾಧ್ಯತೆಯಿದೆ’’ ಎಂದು ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






