IPL ಆರಂಭಕ್ಕೂ ಮುನ್ನ ಅಭಿಮಾನಿಗಳಿಗೆ ವಿಶೇಷ ಮನವಿಯಿಟ್ಟ ವಿರಾಟ್ ಕೊಹ್ಲಿ!

ಐಪಿಎಲ್ ಸೀಸನ್-18 ಆರಂಭಿಸುವ ಇರಾದೆಯಲ್ಲಿದ್ದ ಆರ್ಸಿಬಿ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಪರೋಕ್ಷ ಸಂದೇಶ ರವಾನಿಸಿದ್ದಾರೆ.
ಹೌದು, ವಿರಾಟ್ ಕೊಹ್ಲಿ ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳ್ಬೇಡಿ ಎಂದು ಎಬಿ ಡಿವಿಲಿಯರ್ಸ್ಗೆ ಪರ್ಸನಲ್ ಮೆಸೇಜ್ ಕಳಿಸಿದ್ದಾರೆ. ಈ ವಿಚಾರವನ್ನು ಖುದ್ದು ಎಬಿಡಿ ಬಹಿರಂಗಪಡಿಸಿದ್ದಾರೆ.
ಖಾಸಗಿ ಚಾನೆಲ್ ಚರ್ಚೆಯಲ್ಲಿ ಮಾತನಾಡಿದ ಎಬಿಡಿ, ಎಲ್ಲೋ ಒಂದ್ಸಲ ನಾನು ಈ ಸಲ ಕಪ್ ನಮ್ದೇ ಅಂತ ಹೇಳಿದ್ದೆ. ಇದನ್ನು ನೋಡಿದ ವಿರಾಟ್ ಕೊಹ್ಲಿ ನನಗೆ ಪರ್ಸನಲ್ ಮೆಸೇಜ್ ಕಳಿಸಿ, ದಯವಿಟ್ಟು ಅದನ್ನು ಮಾತ್ರ ಹೇಳ್ಬೇಡಿ. ಈ ಸಲ ಕಪ್ ನಮ್ದೇ ಎನ್ನುವುದು ಕೇಳಿ ಕೇಳಿ ಸಾಕಾಗಿದೆ ಎಂದಿದ್ದರು.
ಹೀಗಾಗಿ ಈ ಘೋಷವಾಕ್ಯವನ್ನು ನಾನು ಬಿಟ್ಟಿದ್ದೀನಿ. ಇದಾಗ್ಯೂ ಈ ಸಲ ಆರ್ಸಿಬಿ ಕಪ್ ಗೆಲ್ಲುತ್ತೆ ಎಂಬ ವಿಶ್ವಾಸವಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಉತ್ತಮ ಸಮತೋಲನದಿಂದ ಕೂಡಿದೆ. ಹೀಗಾಗಿ ಈ ಬಾರಿ ಚೊಚ್ಚಲ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯಿದೆ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






