IT Raids: ಬೆಳ್ಳಂಬೆಳಗ್ಗೆ ಐಟಿ ದಾಳಿ: ನಿದ್ದೆಯಲ್ಲಿದ್ದ ಉದ್ಯಮಿಗಳಿಗೆ ಶಾಕ್

ಸಕ್ಕರೆ ಕಾರ್ಖಾನೆ, ಐರಾನ್ ಹಾಗೂ ಗ್ರಾನೈಟ್ ಉದ್ಯಮಿ ಆಗಿರುವ ದೊಡ್ಡಣ್ಣವರ ಕುಟುಂಬ, ಬೆಳಗಾವಿಯ ಖ್ಯಾತ ಉದ್ಯಮಿ ಅನಿಸಿಕೊಂಡಿದೆ. ಈ ಉದ್ಯಮಿಗಳು ಐರಾನ್ ಹಾಗೂ ಗ್ರಾನೈಟ್ಗಳನ್ನು ದೇಶ- ವಿದೇಶಗಳಿಗೆ ರಫ್ತು ಮಾಡುತ್ತಿದ್ದರು.
ಅಲ್ಲದೇ ಕಾಗವಾಡ ತಾಲೂಕಿನಲ್ಲಿ ಎರಡು ಸಕ್ಕರೆ ಕಾರ್ಖಾನೆಗಳನ್ನು ಈ ಕುಟುಂಬ ಹೊಂದಿದೆ. ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇರುವ ಇಬ್ಬರು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






