JDS-BJP Big Fight; ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಫ್ಲೆಕ್ಸ್ಗೆ ಪೆಟ್ರೋಲ್ ಸುರಿದು ಬೆಂಕಿ.!

ಮಂಡ್ಯ ನಗರದ ಹೊರವಲಯದ ಉಮ್ಮಡಹಳ್ಳಿ ಸಮೀಪ ಬೆಂಗಳೂರು-ಮೈಸೂರು ಅಂಡರ್ ಪಾಸ್ ಸೇತುವೆ ಬಳಿ ಹಾಸನದ ಮಾಜಿ ಶಾಸಕ ಪ್ರೀತಂಗೌಡ ಅವರ ಭಾವಚಿತ್ರವಿದ್ದ ಫ್ಲೆಕ್ಸ್ಗೆ ಕಿಡಿಗೇಡಿಗಳು ಬುಧವಾರ ತಡರಾತ್ರಿ ಬೆಂಕಿ ಹಚ್ಚಿದ್ದಾರೆ.
ಫ್ಲೆಕ್ಸ್ಗೆ ಪೆಟ್ರೋಲ್ ಸುರಿದು ಅದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೈಸೂರು ಚಲೋ ಪಾದಯಾತ್ರೆ ವೇಳೆ ನಗರದ ಮಹಾವೀರ ವೃತದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತ ನಡುವೆ ಸಂಘರ್ಷ ಉಂಟಾಗಿತ್ತು.
ಪಾದಯಾತ್ರೆಯಲ್ಲಿ ಪ್ರೀತಂಗೌಡ ಅವರು ಕಾಣಿಸಿಕೊಂಡಾಗ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬರುತ್ತಿದ್ದ ಎತ್ತಿನಗಾಡಿಯನ್ನು ತಡೆದು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಪೊಲೀಸರು ಮತ್ತು ವಿಜಯೇಂದ್ರ ಅವರು ಮಧ್ಯಪ್ರವೇಶಿಸಿ ಕಾರ್ಯಕರ್ತರನ್ನು ಸಮಾಧಾನಪಡಿಸಿದ್ದರು.
ವೆಬ್ ಡೆಸ್ಕ್,
ಫೋಕಸ್ ಕರ್ನಾಟಕ.
ನಿಮ್ಮ ಪ್ರತಿಕ್ರಿಯೆ ಏನು?






