Kantara 1.. “ಕಾಂತಾರ 1”ಗೆ ಎದುರಾಯ್ತು ಮತ್ತೊಂದು ಆಪತ್ತು: ಚಿತ್ರೀಕರಣಕ್ಕೆ ಆಗಮಿಸಿದ್ದ ಕಲಾವಿದ ಸಾವು!

ಜೂನ್ 12, 2025 - 12:03
 0  10
Kantara 1.. “ಕಾಂತಾರ 1”ಗೆ ಎದುರಾಯ್ತು ಮತ್ತೊಂದು ಆಪತ್ತು: ಚಿತ್ರೀಕರಣಕ್ಕೆ ಆಗಮಿಸಿದ್ದ ಕಲಾವಿದ ಸಾವು!

ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಸಿನಿಮಾ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿತ್ತು. 16 ಕೋಟಿ ರೂಪಾಯಿ ಬಜೆಟ್ ಸಿನಿಮಾ ಬರೋಬ್ಬರಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ದಾಖಲೆ ನಿರ್ಮಿಸಿತ್ತು. ಈ ಸಿನಿಮಾವನ್ನು ದೇಶವೇ ಮೆಚ್ಚಿಕೊಂಡಿತ್ತು.

ಇದೀಗ ಈ ಸಿನಿಮಾ ಮೊದಲ ಭಾಗ ನಿರ್ಮಾಣಗೊಳ್ಳುತ್ತಿದೆ. ಈ ಸಿನಿಮಾಗಾಗಿ ಭಾರತೀಯರು ಕಾಯುತ್ತಿದ್ದಾರೆ. ಆದರೆ ಈ ಸಿನಿಮಾ ಹಲವು ಅಡೆ ತಡೆ ಎದುರಿಸುತ್ತಿದೆ. ಕಾಂತಾರ ಸಿನಿಮಾ ಚಾಪ್ಟರ್ 1 ಸಿನಿಮಾ ಮೇಲಿಂದ ಮೇಲೆ ಸಮಸ್ಯೆಗಳನ್ನು ಎದುರಿಸುತ್ತಿದೆ. ಇದೀಗ ಕಾಂತಾರ 1 ಸಿನಿಮಾದ ಮಿಮಿಕ್ರಿ ಕಲಾವಿದ ಕೊನೆಯುಸಿರೆಳೆದಿದ್ದಾರೆ.

ಕೇರಳ ಮೂಲದ ಮಿಮಿಕ್ರಿ ಕಲಾವಿದ ನಿಜು ವಿ ಕೆ ಅವರು ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಮ್ ಸ್ಟೇ ಒಂದರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಿಮಿಕ್ರಿ ಕಲಾವಿದ ನಿಜು ವಿ ಕೆ ಅವರು 'ಕಾಂತಾರ: ಚಾಪ್ಟರ್ 1' ಚಿತ್ರದ ಚಿತ್ರೀಕರಣಕ್ಕಾಗಿ ಆಗಮಿಸಿದ್ದರು. ಅವರು ಆಗುಂಬೆ ಹೋಮ್ ಸ್ಟೇ ಒಂದರಲ್ಲಿ ತಂಗಿದ್ದರು.

ಬುಧವಾರ ರಾತ್ರಿ (ಜೂನ್ 11) ನಿಜು ವಿ ಕೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಗುತ್ತಿತ್ತು. ಅಷ್ಟರಲ್ಲೇ ಮಾರ್ಗ ಮಧ್ಯೆಯೇ ನಿಜು ವಿ ಕೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ನಿಜು ವಿ ಕೆ ಅವರ ಮೃತ ದೇಹವನ್ನು ತೀರ್ಥಹಳ್ಳಿಯ ಜೆ ಸಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ನಿಜು ವಿ ಕೆ ಕುಟುಂಬಸ್ಥರು ಕೇರಳದಿಂದ ತೀರ್ಥಹಳ್ಳಿಗೆ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow