Karnataka Bandh: ಮಾ 22ರಂದು ಕರ್ನಾಟಕ ಬಂದ್: ರಾಜ್ಯದಲ್ಲಿ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಪುಂಡರ ದಬ್ಬಾಳಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಇದೇ ಶನಿವಾರ ಅಂದ್ರೆ ಮಾರ್ಚ್ 22ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಮಾರ್ಚ್ 22 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಕರ್ನಾಟಕ ಬಂದ್ ಇರಲಿದೆ. ಅಂದು ಬೆಳಗ್ಗೆ 9.30 ಕ್ಕೆ ಫ್ರೀಡಂ ಪಾರ್ಕ್ ತನಕ ಸ್ವಾಭಿಮಾನದ ಮೆರವಣಿಗೆ ನಡೆಯಲಿದ್ದು, ಎಲ್ಲರೂ ಈ ಸ್ವಾಭಿಮಾನದ ಮೆರವಣಿಗೆಯಲ್ಲಿ ಭಾಗಿಯಾಗಬೇಕು ಎಂದು ವಾಟಾಳ್ ನಾಗರಾಜ್ ಕರೆ ಕೊಟ್ಟಿದ್ದಾರೆ.
ಓಲಾ ಉಬರ್ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಅಶೋಕ್ ಪ್ರತಿಕ್ರಿಯಿಸಿದ್ದು, ನಾಡು, ನುಡಿ, ಭಾಷೆಗೆ ನಾವು ಸಂಪೂರ್ಣ ಬೆಂಬಲ ಕೊಡುತ್ತೇವೆ. ಎಲ್ಲಾ ಹೋರಾಟಗಳಿಗೆ ನಾವು ಸದಾಕಾಲ ಬೆಂಬಲ ನೀಡುತ್ತಿವೆ. ಸುಮಾರು ಎರಡು ಲಕ್ಷ ಓಲಾ, ಉಬರ್ ಬಂದ್ ಮಾಡುತ್ತೇವೆ ಎಂದಿದ್ದಾರೆ.
ಅದೇ ರೀತಿಯಾಗಿ ಕಾರ್ಮಿಕ ಪರಿಷತ್ ಸಂಪೂರ್ಣ ನಾಡಿನ ಹಿತಕ್ಕಾಗಿ ಬೆಂಬಲ ಇದೆ. ಸ್ವಯಂವಾಗಿ ನಾವು ಕೆಲಸಕ್ಕೆ ಗೈರಾಗುವು ಮೂಲಕ ಬೆಂಬಲ ನೀಡುತ್ತೇವೆ. ಎಲ್ಲಾ ಕಾರ್ಮಿಕ ಇಲಾಖೆಗಳ ಕಾರ್ಮಿಕರಿಗೆ ಮನವಿ ಮಾಡಿದ್ದೇವೆ ಎಂದು ರಾಜ್ಯ ಕಾರ್ಮಿಕ ಪರಿಷತ್ತು ಅಧ್ಯಕ್ಷ ರವಿ ಶೆಟ್ಟಿ ಬೈಂದೂರು ತಿಳಿಸಿದ್ದಾರೆ.
ಏನಿರುತ್ತೆ
- ಆಸ್ಪತ್ರೆ
- ಮೆಡಿಕಲ್
- ಹಾಲು
- ಅಗತ್ಯವಸ್ತುಗಳು
- ಮೆಟ್ರೋ
ಏನಿರಲ್ಲ
- ಓಲಾ, ಉಬರ್, ಆಟೋ
ಯಾರೆಲ್ಲಾ ಬೆಂಬಲ
- ಓಲಾ, ಊಬರ್ ಟ್ಯಾಕ್ಸಿ ಅಸೋಸಿಯೇಷನ್
- ಎರಡು ಆಟೋ ಅಸೋಸಿಯೇಷನ್
- ಎಪಿಎಂಸಿ ಸಂಘಟನೆ ಬೆಂಬಲ
50-50 ಬೆಂಬಲ
- ಕೆಲ ಸಾರಿಗೆ ನೌಕರ ಸಂಘದಿಂದ
- ಸಿನಿಮಾ ಥಿಯೇಟರ್, ಚಲನಚಿತ್ರ ವಾಣಿಜ್ಯ ಮಂಡಳಿ
- ಹೋಟೆಲ್ ಸಂಘಟನೆ
- ಮಾಲ್
- ಬೇಕರಿ
- ಬಾರ್ ಆ್ಯಂಡ್ ರೆಸ್ಟೋರೆಂಟ್
- ಅಂಗಡಿ ಮುಗ್ಗಟ್ಟು
- ಬೀದಿ ಬದಿ ವ್ಯಾಪಾರ
ನಿಮ್ಮ ಪ್ರತಿಕ್ರಿಯೆ ಏನು?






