Karnataka Budget 2025: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ: ಯಾವ್ಯಾವ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನಿರೀಕ್ಷೆ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮೂರನೇ ಬಜೆಟ್ ಇದಾಗಿದೆ. ಈ ಬಜೆಟ್ ಮೇಲೆ ಹಲವು ನಿರೀಕ್ಷೆಗಳಿದ್ದು, ಮೇಕೆದಾಟು ಯೋಜನೆಗಿರುವ ಅಡೆತಡೆ ನಿವಾರಣೆಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದ್ದು,
ಶೀಘ್ರ ಕಾಮಗಾರಿ ಆರಂಭಿಸಲು ಅಗತ್ಯ ಆರ್ಥಿಕ ನೆರವು ನೀಡುವ ಸಾಧ್ಯತೆ. ಕೃಷ್ಣ ಕಳಸಾ ಬಂಡೂರಿ ಯೋಜನೆಗೆ ವಿಶೇಷ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಜಲ ಸಂಪನ್ಮೂಲ ನಿಯಂತ್ರಣ ಪ್ರಾಧಿಕಾರ ರಚನೆ, ಜಲಸಂಪನ್ಮೂಲ ವಿಶ್ವವಿದ್ಯಾಲಯ ಸ್ಥಾಪನೆಯಾಗುವ ಸಾಧ್ಯತೆ ಇದೆ.
ಅಣೆಕಟ್ಟುಗಳ ಗೇಟ್ಗಳ ಆಧುನೀಕರಣ ಮತ್ತು ನವೀಕರಣ, ಗಂಗಾರತಿ ಮಾದರಿಯಲ್ಲಿ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಮತ್ತು ನೀರು ಬಳಕೆದಾರ ಸಹಕಾರ ಸಂಘದ ಒಕ್ಕೂಟ ರಚನೆ ಸಾಧ್ಯತೆ ಇದೆ.
2025-26ನೇ ಸಾಲಿನ ಕರ್ನಾಟಕ ಬಜೆಟ್ ಇಂದು ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆ 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ. ದಾಟುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯದ ಜನರು ಮತ್ತು ಶಾಸಕರು ವಿಶೇಷ ಅನುದಾನದ ನಿರೀಕ್ಷೆಯಲ್ಲಿದ್ದಾರೆ. ಗ್ಯಾರಂಟಿಗೆ ಹಣಕಾಸು ಪರಿಸ್ಥಿತಿ ಸರಿದೂಗಿಸಲು ವಿಶೇಷ ಆದ್ಯತೆ ನೀಡುವ ಸಾಧ್ಯತೆ ಇದೆ.
ಕಳೆದ ಎರಡು ಬಜೆಟ್ಗಳಲ್ಲಿ ನೀರಾವರಿ, ಲೋಕೋಪಯೋಗಿ, ಮೂಲಸೌಕರ್ಯ, ನಗರಾಭಿವೃದ್ಧಿ ಮತ್ತಿತರ ಇಲಾಖೆಗಳಿಗೆ ನಿರೀಕ್ಷಿತ ಅನುದಾನ ಸಿಕ್ಕಿರಲಿಲ್ಲ. ವಸತಿ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆಗಳಿಗೂ ಅನುದಾನ ಖೋತಾ ಆಗಿತ್ತು.
ಈ ಸಲ ಅಭಿವೃದ್ಧಿ ಕೆಲಸಗಳಿಗೆ ಒತ್ತಾಸೆ ಸಿಗುವ ಜತೆಗೆ, ಆಸ್ತಿ ಸೃಜನೆಯಂತಹ ಮೂಲಸೌಕರ್ಯಕ್ಕೆ ದೊಡ್ಡ ಮಟ್ಟದಲ್ಲಿಆದ್ಯತೆ ಸಿಗುವ ಭರವಸೆ ಮೂಡಿದೆ. ಹಳೆಯ ಯೋಜನೆಗಳ ಮುಂದುವರಿಕೆ ಜತೆಗೆ, ಗ್ಯಾರಂಟಿಗಳ ಯತಾಸ್ಥಿತಿ ಕಾಯ್ದುಕೊಂಡು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೊಸ ಬಜೆಟ್ನಲ್ಲಿ ಕೆಲವೊಂದು ಪ್ರಮುಖ ಘೋಷಣೆಗಳನ್ನೂ ಮಾಡುವ ನಿರೀಕ್ಷೆಯಿದೆ.
ನಿಮ್ಮ ಪ್ರತಿಕ್ರಿಯೆ ಏನು?






