Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜೂನ್ 26ರವರೆಗೂ ಮಳೆಯಾಗಲಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ. ಉಪ್ಪಿನಂಗಡಿ, ಗೇರುಸೊಪ್ಪ, ಮಂಕಿ, ಯಲ್ಲಾಪುರ, ಆಗುಂಬೆ, ಕೊಟ್ಟಿಗೆಹಾರ, ಕಮ್ಮರಡಿ, ಭಾಗಮಂಡಲ, ಹುಂಚದಕಟ್ಟೆ, ಶಿರಾಲಿ, ಕದ್ರಾ, ಸುಳ್ಯ, ಕುಮಟಾ, ಧರ್ಮಸ್ಥಳ, ಬನವಾಸಿ, ಜೋಯ್ಡಾ, ಬೆಳ್ತಂಗಡಿ, ಹೊನ್ನಾವರ, ತ್ಯಾಗರ್ತಿ, ಖಾನಾಪುರ್, ಗುತ್ತಲ್, ಆನವಟ್ಟಿ, ಕಳಸ, ವಿರಾಜಪೇಟೆ, ಹೊಸಕೋಟೆ, ಅಂಕೋಲಾ, ಪುತ್ತೂರ್, ಮೂಡುಬಿದಿರೆ, ಬಂಟವಾಳ, ಸಿದ್ದಾಪುರ, ಮಾಣಿ, ಕಾರವಾರ, ಮುಂಡಗೋಡಿನಲ್ಲಿ ಮಳೆಯಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






