KRS ರಸ್ತೆಗೆ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನದ ವಿರುದ್ಧ ಸ್ನೇಹಮಯಿ ಕೃಷ್ಣ ಆಕ್ಷೇಪ

ಡಿಸೆಂಬರ್ 30, 2024 - 21:05
 0  18
KRS ರಸ್ತೆಗೆ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನದ ವಿರುದ್ಧ ಸ್ನೇಹಮಯಿ ಕೃಷ್ಣ ಆಕ್ಷೇಪ

ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರಿಟ್ಟು ಮರುನಾಮಕರಣ ಮಾಡಲು ಮೈಸೂರು ನಗರ ಪಾಲಿಕೆ ಮುಂದಾಗಿರುವುದು ಈಗ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಮೈಸೂರಿನ ಹೃದಯಭಾಗದಲ್ಲಿರುವ ಒಂಟಿಕೊಪ್ಪಲ್ ಲಕ್ಷೀ ವೆಂಕಟೇಶ್ವರ ದೇವಸ್ಥಾನದಿಂದ ರಾಯಲ್ ಇನ್ ಹೋಟೆಲ್‌ವರೆಗಿನ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಲು ಪಾಲಿಕೆ ಮುಂದಾಗಿದೆ. ಪಾಲಿಕೆಯ ನಿರ್ಧಾರಕ್ಕೆ ಸಾಮಾಜಿಕ ಕಾರ್ಯಕರ್ತ, ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ.

ಹೌದು ನಗರಪಾಲಿಕೆ ಆಯುಕ್ತರಿಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪತ್ರ ಬರೆದಿದ್ದು, ಕೂಡಲೇ ರಾಜಕುಮಾರಿ ರಸ್ತೆ ನಾಮಫಲಕ ಅಳವಡಿಸುವಂತೆ ಆಗ್ರಹಿಸಿದ್ದಾರೆ. ಮೈಸೂರು ನಗರ ಪಾಲಿಕೆ ವತಿಯಿಂದ ಪ್ರಿನ್ಸೆಸ್ ರೋಡ್ ನಾಮಫಲಕ ಅಳವಡಿಸಿ ಗೊಂದಲವನ್ನು ನಿವಾರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. 

ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂಬ ಹೆಸರನ್ನು ನಾಮಕರಣ ಮಾಡುವ ಪ್ರಸ್ತಾವನೆ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿರುವ ಅವರು, ಹಲವು ದಾಖಲೆಗಳನ್ನೂ ನೀಡಿದ್ದಾರೆ. ಸಾಮಾಜಿಕ‌ ಜಾಲತಾಣದಲ್ಲಿ ಹರಿದಾಡುತ್ತಿರುವ ಪ್ರಿನ್ಸೆಸ್ ರಸ್ತೆ ಹೆಸರಿನ ದಾಖಲೆಗಳನ್ನೂ ನೀಡಿದ್ದಾರೆ. ಜತೆಗೆ ರೈಲ್ವೆ ಇಲಾಖೆಯಲ್ಲಿ ಉಲ್ಲೇಖವಿರುವ ಬಗ್ಗೆಯೂ ದಾಖಲೆ ನೀಡಿದ್ದಾರೆ.

ಮಾಜಿ ಸಂಸದ ಪ್ರತಾಪಸಿಂಹ ಸಭೆ ನಡಾವಳಿಯಲ್ಲೂ ‘ಪ್ರಿನ್ಸೆಸ್ ರಸ್ತೆ’ ಎಂದು ನಮೂದಾಗಿರುವ ದಾಖಲೆ ನೀಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಹೆಸರು ರಸ್ತೆಗೆ ಇರುವ ಪ್ರಸ್ತಾವಕ್ಕೆ ಬೆಂಬಲ‌ ನೀಡದಂತೆ ಪ್ರತಾಪಸಿಂಹ ಅವರಿಗೂ ಮನವಿ ಮಾಡಿದ್ದಾರೆ.

 

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow