KTR ಬಳಿ ಹೋಗಲು ಸಮಂತಾಗೆ ನಾಗಾರ್ಜುನ ಒತ್ತಾಯ: ನಾಲಿಗೆ ಹರಿಬಿಟ್ಟ ಸಚಿವೆ!

ಹೈದರಾಬಾದ್:- ನಾಗ ಚೈತನ್ಯ ವಿಚ್ಛೇದನದ ಕುರಿತು ತೆಲಂಗಾಣ ಸಚಿವೆ ಕೊಂಡಾ ಸುರೇಖಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟಾಲಿವುಡ್ ನಟ ನಾಗಚೈತನ್ಯ ಮತ್ತು ಸಮಂತಾ ದಾಂಪತ್ಯ ಮುರಿದುಬೀಳಲು ಬಿಆರ್ಎಸ್ ಮುಖಂಡ ಕೆಟಿಆರ್ ಅವರೇ ಕಾರಣ ಎಂದು ಸಚಿವೆ ಕೊಂಡಾ ಸುರೇಖಾ ಸ್ಫೋಟಕ ಆರೋಪ ಮಾಡಿದ್ದಾರೆ.
ಸಮಂತಾ ರುತ್ ಪ್ರಭು, ನಾಗಾರ್ಜುನ ಮತ್ತು ನಾಗ ಚೈತನ್ಯ ಅವರ ಬಗ್ಗೆ ತೀರಾ ಅಸಭ್ಯ ರೀತಿಯಲ್ಲಿ ಅವರು ಮಾತನಾಡಿದ್ದಾರೆ. ಸಾರ್ವಜನಿಕವಾಗಿ ಕೊಂಡ ಸುರೇಖಾ ಆಡಿರುವ ಮಾತುಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಕೆ.ಟಿ. ರಾಮ ರಾವ್ ಅವರನ್ನು ವಿರೋಧಿಸುವ ಭರದಲ್ಲಿ ಸುರೇಖಾ ಅವರು ಇಲ್ಲಸಲ್ಲದ ವಿಚಾರಗಳನ್ನು ಎಳೆದು ತಂದಿದ್ದಾರೆ. ನಾಗ ಚೈತನ್ಯ ಮತ್ತು ಸಮಂತಾ ವಿಚ್ಛೇದನ ಪಡೆಯಲು ಕೆ.ಟಿ. ರಾಮ ರಾವ್ ಕಾರಣ ಎಂದು ಸುರೇಖಾ ಹೇಳಿದ್ದಾರೆ.
ಕೆಟಿಆರ್ ಬಳಿ ಹೋಗ್ಲಿಲ್ಲ ಅಂದ್ರೆ ಮನೆಯಲ್ಲಿ ಇರುವಂತಿಲ್ಲ ಎಂದು ಸಮಂತಾಗೆ ನಟ ನಾಗಾರ್ಜುನ ಬೆದರಿಕೆ ಹಾಕಿದ್ದರು ಎಂದೂ ಆಪಾದಿಸಿದ್ದಾರೆ. ‘ಎನ್ ಕನ್ವೆನ್ಷನ್ ಕಟ್ಟಡ ಒಡೆಯಬಾರದು ಎಂದರೆ ಸಮಂತಾಳನ್ನು ನನ್ನ ಬಳಿ ಕಳಿಸಿ ಎಂದು ನಾಗಾರ್ಜುನಗೆ ಕೆ.ಟಿ. ರಾಮ ರಾವ್ ಹೇಳಿದ್ದರು. ಕೆ.ಟಿ. ರಾಮ ರಾವ್ ಬಳಿ ಹೋಗು ಎಂದು ಸಮಂತಾಗೆ ನಾಗಾರ್ಜನ ಒತ್ತಾಯ ಮಾಡಿದರು. ಆದರೆ ಸಮಂತಾ ಒಪ್ಪಿಕೊಳ್ಳಲಿಲ್ಲ. ಒಪ್ಪದಿದ್ದರೆ ಮನೆ ಬಿಟ್ಟುಹೋಗು ಎಂದು ನಾಗಾರ್ಜುನ ಹೇಳಿದರು. ಅದಕ್ಕಾಗಿ ನಾಗ ಚೈತನ್ಯಗೆ ಸಮಂತಾ ಡಿವೋರ್ಸ್ ನೀಡಿದರು’ ಎಂದು ಕೊಂಡ ಸುರೇಖಾ ಹೇಳಿದ್ದಾರೆ
ಇದಕ್ಕೆ ನಟ ನಾಗಾರ್ಜುನ, ನಟಿ ಸಮಂತಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.ಕೊಂಡ ಸುರೇಖಾ ಹೇಳಿದ ಈ ಮಾತಿನಿಂದ ನಾಗಾರ್ಜುನ ಅವರು ಗರಂ ಆಗಿದ್ದಾರೆ. ‘ಗೌರವಾನ್ವಿತ ಸಚಿವೆ ಕೊಂಡ ಸುರೇಖಾ ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ನಿಮ್ಮ ವಿರೋಧಿಗಳನ್ನು ಟೀಕಿಸಲು, ರಾಜಕೀಯದಿಂದ ದೂರ ಇರುವ ಸಿನಿಮಾ ತಾರೆಯರನ್ನು ಬಳಸಿಕೊಳ್ಳಬೇಡಿ. ಇನ್ನೊಬ್ಬರ ಖಾಸಗಿತನವನ್ನು ಗೌರವಿಸಿ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಮಹಿಳೆಯಾಗಿ ನಮ್ಮ ಕುಟುಂಬದ ಮೇಲೆ ನೀವು ಮಾಡಿದ ಆರೋಪಗಳು ಸಂಪೂರ್ಣ ತಪ್ಪು. ಕೂಡಲೇ ನಿಮ್ಮ ಹೇಳಿಕೆ ವಾಪಸ್ಸು ಪಡೆದುಕೊಳ್ಳಿ ಎಂದು ಮನವಿ ಮಾಡುತ್ತೇನೆ’ ಎಂದು ನಾಗಾರ್ಜುನ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಕೊಂಡಾ ಸುರೇಖಾ ಅವರ ಹೇಳಿಕೆಗೆ ನಟಿ ಸಮಂತಾ ರುತ್ ಪ್ರಭು ಕೂಡ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






