Kunigal Ranganath: 2028ರಲ್ಲಿ ನಮ್ಮ ಸರ್ಕಾರ ಬಂದ್ರೆ ಗೃಹಲಕ್ಷ್ಮಿ ಹಣ 4000ಕ್ಕೆ ಏರಿಕೆ ಮಾಡ್ತೇವೆ: ಕುಣಿಗಲ್ ರಂಗನಾಥ್

ಬೆಂಗಳೂರು: ಬಡವರಿಗೆ ಪ್ರತಿವರ್ಷ 24,000 ಕೊಟ್ಟರೆ ಅವರ ಬದುಕಿನಲ್ಲಿ ಬದಲಾವಣೆ ಯಾಗುತ್ತದೆ ಎಂದು ಕಾಂಗ್ರೆಸ್ ಸದಸ್ಯ ಕುಣಿಗಲ್ ರಂಗನಾಥ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಿಂದ ಏನಾಗುತ್ತೆ ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ. ಬಡವರಿಗೆ ಪ್ರತಿವರ್ಷ 24,000 ಕೊಟ್ಟರೆ ಅವರ ಬದುಕಿನಲ್ಲಿ ಬದಲಾವಣೆ ಬರುತ್ತದೆ.
ಗೃಹ ಲಕ್ಷ್ಮಿ ಯೋಜನೆಗೆ ವಿರೋಧಿಸಿದರೆ ಜನರ ಶಾಪ ತಟ್ಟುತ್ತದೆ. ಮುಂದೆ ಸರ್ಕಾರ ಬದಲಾವಣೆ ಆದರೂ ಗ್ಯಾರಂಟಿ ಯೋಜನೆ ನಿಲ್ಲಿಸಲು ಅಸಾಧ್ಯ. 2028 ರಲ್ಲಿ ನಮ್ಮ ಸರ್ಕಾರ ಬಂದರೆ ಗೃಹಲಕ್ಷ್ಮೀ ಹಣವನ್ನು 2 ಸಾವಿರದಿಂದ 4 ಸಾವಿರಕ್ಕೆ ಏರಿಕೆ ಮಾಡಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಕುಟುಂಬ ಕಲ್ಯಾಣ ಯೋಜನೆ ಜಾರಿ ಮಾಡಿದ್ದೇವೆ. ದಕ್ಷಿಣ ಭಾರತದ ರಾಜ್ಯಗಳು ಜಾರಿಮಾಡಿವೆ. ಮನೆಗೆ ಎರಡೇ ಮಕ್ಕಳ ಮೂಲಕ ಕಡಿವಾಣ ಹಾಕಿದ್ದೇವೆ. ಆದರೆ, ಕೇಂದ್ರ ಸರ್ಕಾರ ಜನಗಣತಿ ಆಧಾರ ಮೇಲೆ ಕ್ಷೇತ್ರ ವಿಂಗಡಿಸುತ್ತಿದೆ. ಇದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಲಾಭವಾಗಲಿದೆ. ಕೇಂದ್ರ ಸರ್ಕಾರ ಜನಗಣತಿ ಆಧಾರ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಮಾಡಬಾರದು ಎಂದು ಒತ್ತಾಯ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






