Lokayukta Raid: ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್!

ನವೆಂಬರ್ 12, 2024 - 12:09
 0  31
Lokayukta Raid: ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್!

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೀದರ್, ಬೆಳಗಾವಿ, ಧಾರವಾಡ, ಗದಗ, ದಾವಣಗೆರೆ ಮತ್ತು ಮೈಸೂರಿನ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೈಡ್ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ವಿಠ್ಠಲ್ ಡವಳೇಶ್ವರ ಈ‌ ಹಿಂದೆ ಅಕ್ರಮವಾಗಿ 1.10 ಕೋಟಿ ಹಣವನ್ನು ಚಿಕ್ಕೋಡಿಯಿಂದ ಬಾಗಲಕೋಟೆಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದರು. ಇದರ ಮುಂದುವರೆದ ಭಾಗವಾಗಿ ‌ದಾಳಿ ನಡೆದಿದೆ ಎನ್ನಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೈಸೂರು ನಗರ ಪಾಲಿಕೆಯ ವಲಯ ಆಯುಕ್ತ ನಾಗೇಶ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು, ಶ್ರೀರಂಗಪಟ್ಟಣದಲ್ಲಿರುವ ನಾಗೇಶ್​ನ ಮತ್ತೊಂದು ಮನೆ ಮೇಲೂ ಲೋಕಾಯುಕ್ತ ರೇಡ್ ಮಾಡಿದೆ. ನಾಗೇಶ್ ಹಿಂದೆ ಶ್ರೀರಂಗಪಟ್ಟಣ ತಹಶೀಲ್ದಾರ್ ಆಗಿದ್ದರು.

ಧಾರವಾಡದ ಗಾಂಧಿನಗರ ಬಡಾವಣೆಯಲ್ಲಿರುವ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮನೆ ಎದುರಿನಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಲ್ಲೂ ಪರಿಶೀಲನೆ ನಡೆಸಿದ್ದಾರೆ. ಗೋವಿಂದಪ್ಪ ಭಜಂತ್ರಿಗೆ ಸೇರಿದ ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್​ಹೌಸ್ ಧಾರವಾಡದ ತೇಜಸ್ವಿನಗರ ಬಡಾವಣೆಯ ಅಳಿಯನ ಮನೆ, ಲಕ್ಕಮನಹಳ್ಳಿ ಬಡಾವಣೆ ಕೆಐಎಡಿಬಿ ಕಚೇರಿ ಮೇಲೂ ದಾಳಿ ಮಾಡಿದ್ದಾರೆ. ಹಾಗೇ ನರಗುಂದದಲ್ಲಿರುವ ಸಹೋದರನ ಮನೆ ಮೇಲೂ ಡಿವೈಎಸ್​ಪಿ ವೆಂಕನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow